• Sun. May 5th, 2024

PLACE YOUR AD HERE AT LOWEST PRICE

ಶ್ರೀನಿವಾಸಪುರ:ತಾಲ್ಲೂಕಿನ ಬಂಗವಾದಿ ಸರ್ಕಾರಿ ಶಾಲೆಗೆ ಕಾಯ್ದಿರಿಸಿರುವ ಜಾಗವನ್ನು ಒತ್ತುವರಿ ತೆರವುಗೊಳಿಸಿ ಆ ಜಮೀನನ್ನು ರಕ್ಷಿಸಬೇಕು ಎಂದು ನಿವೃತ್ತ ಮುಖ್ಯ ಶಿಕ್ಷಕ ಬಂಗವಾದಿ ನಾರಾಯಣಪ್ಪ ಮತ್ತು ಗ್ರಾಮಸ್ಥರು ಜಿಲ್ಲಾಧಿಕಾರಿಗಳನ್ನು ಮನವಿ ಮಾಡಿದ್ದಾರೆ.

ಈ ಬಗ್ಗೆ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿಪತ್ರ ಸಲ್ಲಿಸಿದ್ದು, ಮನವಿಯಲ್ಲಿ ಕಳೆದ ಐದು ಹತ್ತು ವರ್ಷಗಳಿಂದ ಸದರಿ ಶಾಲಾಕಟ್ಟಡ ಸರ್ವೇ ನಂಬರ್ ನಲ್ಲಿ ಇದೆ ಎಂದು ಆ ಭೂಮಿಯ ವಾರಸುದಾರರು ಶಾಲೆಗೆ ಸರ್ಕಾರದಿಂದ ಮಂಜೂರಾದ ಎರಡು ಎಕರೆ ಆಟದ ಮೈದಾನ ಭೂಮಿಯನ್ನು ಸುಮಾರು ಹದಿನಾರು ಗುಂಟೆ ಒತ್ತುವರಿ ಮಾಡಿಕೊಂಡಿದ್ದಾರೆ.

ಈಗ ಶಾಲಾ ಕಟ್ಟಡಗಳು ಶಿಥಿಲಗೊಂಡು ಶಾಲಾ ಚಟುವಟಿಕೆಗಳು ನಡೆಸಲು ಮೈದಾನವಿಲ್ಲದೆ ಕಟ್ಟಡವಿಲ್ಲದೆ ಶಾಲಾ ವಾತಾವರಣ ಇಲ್ಲದ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡದಲ್ಲಿ ತಾತ್ಕಾಲಿಕವಾಗಿ ಪಾಠ ಪ್ರವಚನಗಳು ನಡೆಯುತ್ತಿದ್ದು,  ಬಹುತೇಕ ಮಕ್ಕಳು ಕೂಲಿ ನಾಲಿ ಮಾಡುವ ಅಸ್ಪೃಶ್ಯ ಜಾತಿಯ ಸಮುದಾಯಗಳಿಗೆ ಸೇರಿದವರಾಗಿದ್ದಾರೆ.

ಇತ್ತ ಶಾಲಾ ಕಟ್ಟಡಗಳು ಮತ್ತು ಶಾಲಾ ಆಟದ ಮೈದಾನ ಭೂಮಿ ಒತ್ತುವರಿದಾರರಿಂದ ಆವರಿಸಿ ದಲಿತ ಮಕ್ಕಳಿಗೆ ಸೇರಿದಂತೆ ಎಲ್ಲಾ ಸಮುದಾಯದ ಮಕ್ಕಳಿಗೆ ಶಾಲಾ ಶಿಕ್ಷಣ ಸಿಗದೆ ಅನ್ಯಾಯವಾಗಿದೆ. ಆದುದರಿಂದ ದಯವಿಟ್ಟು ಕೂಡಲೆ ಜಿಲ್ಲಾಧಿಕಾರಿಗಳು ಒತ್ತುವರಿ ತೆರವುಗೊಳಿಸಿ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಮನವಿ ಮಾಡಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!