• Sat. May 18th, 2024

PLACE YOUR AD HERE AT LOWEST PRICE

ಬಂಗಾರಪೇಟೆ:ಮಹಿಳಾ ದಿನಾಚರಣೆ ಕೇವಲ ಆಚರಣೆಗೆ ಸೀಮಿತವಾಗದೆ ಜೀವನದಲ್ಲಿ ಪ್ರತಿಯೊಬ್ಬರು ಗೌರವಿಸಲೇಬೇಕಾದ ವಿಷಯವಾಗಬೇಕು ಎಂದು ಚಿಕ್ಕಅಂಕಂಡಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್ಎಂ ರವಿ ಅಭಿಪ್ರಾಯ ಪಟ್ಟರು.

ಅವರು ತಾಲ್ಲೂಕಿನ ಚಿಕ್ಕಅಂಕಡಹಳ್ಳಿ ಗ್ರಾಪಂ ಕಛೇರಿಯ ಆವರಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಅಯೋಜಿಸಲಾಗಿದ್ದ ಸಾಂಸ್ಕೃತಿಕ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಮಹಿಳೆಯರ ಸಾಧನೆಗಳನ್ನು ಗೌರವಿಸುವ ಮತ್ತು ಮಹಿಳಾ ಹಕ್ಕುಗಳನ್ನು ಉತ್ತೇಜಿಸುವ ದಿನವಾಗಿದೆ. ಭಾರತದ ಸಂವಿಧಾನದಲ್ಲಿ ಲಿಂಗ ತಾರತಮ್ಯವಿಲ್ಲದೆ ಸ್ತ್ರೀ ಮತ್ತು ಪುರುಷರಿಗೆ ಸಮಾನವಾದ ಹಕ್ಕುಗಳನ್ನು ನೀಡಲಾಗಿದೆ.

ವಿಪರ್ಯಾಸವೆಂದರೆ ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಅತ್ಯಾಚಾರಗಳ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದನ್ನು ತಡೆಯುವಲ್ಲಿ ಸರ್ಕಾರಗಳು ಪ್ರಯತ್ನಿಸುತ್ತಿಲ್ಲ. ಇದು ಅತ್ಯಂತ ವಿಷಾದಕರ ಸಂಗತಿಯಾಗಿದೆ ಎಂದು ಅಸಮಾದಾನ ವ್ಯಕ್ತಪಡಿಸಿದರು.

ಮಹಿಳಾ ದಿನಾಚರಣೆ ಅಂಗವಾಗಿ ಗ್ರಾಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಮಹಿಳೆಯರಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಣೆ ಮಾಡಲಾಯಿತು.

ರಂಗೋಲಿ ಸ್ಪರ್ಧೆ, ಮ್ಯೂಸಿಕಲ್ ಚೇರ್, ಸಂಗೀತ ಕಾರ್ಯಕ್ರಮ, ಅಡುಗೆ, ಭಾರತೀಯ ಸಂಸ್ಕೃತಿಯನ್ನು ಉಳಿಸುವ ಬೆಳೆಸುವ  ಉಡುಪುಗಳ ಫ್ಯಾಶನ್ ಶೋ ಮೊದಲಾದ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕೋವಿಡ್ ಸಂದರ್ಭದಲ್ಲಿ ತಮ್ಮ ಜೀವನವನ್ನು ಮುಡಿಪಾಗಿಟ್ಟು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಉತ್ತಮ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತರಿಗೆ ಮತ್ತು ಆಶಾ ಕಾರ್ಯಕರ್ತೆಯರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಸಿ.ಎಂ.ಹರೀಶ್. ಪಿಡಿಓ ಚಿತ್ರಾ. ಉಪಾಧ್ಯಕ್ಷ ಮಂಗಳಾಕ್ಷಮ್ಮ.ಗ್ರಾಮ ಲೆಕ್ಕಿಗ ಮಧು. ಗ್ರಾ.ಪಂ ಸದಸ್ಯ ಶ್ರೀರಾಮ್. ಪ್ರಕಾಶ್. ಮೂರ್ತಿ. ಸುರೇಶ್. ಕಾರ್ಯದರ್ಶಿ ಪ್ರೇಮ. ಇತರರು ಉಪಸ್ಥಿತರಿದ್ದರು.

Related Post

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ
ಯರಗೋಳ್ ಗ್ರಾಮದಲ್ಲಿ “ದಿ 1979 ಅನ್ ಟೋಲ್ಡ್ ಸ್ಟೋರಿ” ಸಿನಿಮಾದ ಅಂತಿಮ ಚಿತ್ರೀಕರಣ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ

Leave a Reply

Your email address will not be published. Required fields are marked *

You missed

error: Content is protected !!