• Fri. May 3rd, 2024

PLACE YOUR AD HERE AT LOWEST PRICE

ಬಂಗಾರಪೇಟೆ :ಕನ್ನಡ ನಾಡಿನ ಜನಪ್ರಿಯ ನಟರಾದ ಪುನೀತ್ ರಾಜಕುಮಾರ್ ಚಲನಚಿತ್ರ ಜೊತೆಗೆ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದು, ಅವರ ಹಾದಿಯಲ್ಲಿ ನಾವು ನಡೆಯೋಣ ಎಂದು ರಾಜರತ್ನ ಪುನೀತ್ ರಾಜಕುಮಾರ್ ಹಾಗೂ ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾದ್ಯಕ್ಷ ಕಣಿಂಬೆಲೆ ರಾಮಪ್ರಸಾದ್ ತಿಳಿಸಿದರು.

ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿ ನಡೆದ ಡಾ.ಪುನೀತ್ ರಾಜಕುಮಾರ್ ರ 48ನೇ  ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಕೇಕ್ ಕತ್ತರಿಸುವ ಮೂಲಕ ಉದ್ಘಾಟಿಸಿ, ಸಸಿಗಳನ್ನು ವಿತರಿಸಿ ಅವರು ಮಾತನಾಡಿ, ಪುನೀತ್ ರಾಜಕುಮಾರ್ ಬೆಟ್ಟದ ಹೂ, ಅಪ್ಪು, ಮಿಲನ, ಆಕಾಶ್, ಅರಸು, ರಾಜಕುಮಾರ ಸೇರಿದಂತೆ ಅತ್ಯುತ್ತಮ ಚಲನಚಿತ್ರಗಳಲ್ಲಿ ಅಭಿನಯಿಸಿ ಜನಮಣ್ಣನೆ ಗಳಿಸಿದ್ದಾರೆ.

ಪುನೀತ್ ರಾಜಕುಮಾರ್ ಇಂದು ನಮ್ಮ ನಡುವೆ ಇಲ್ಲದೆ ಇರಬಹುದು ಆದರೆ ಅವರ ನೆನಪುಗಳು ಸದಾ ನಮ್ಮೊಂದಿಗೆ ಇರುತ್ತವೆ. ಸಿನಿಮಾ, ಸಮಾಜಸೇವೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದರೆ ತಪ್ಪಿಲ್ಲ. ಅವರ ಹುಟ್ಟು ಹಬ್ಬದ ಪರವಾಗಿ ಅನ್ನದಾನ ವ್ಯವಸ್ಥೆ ಹಾಗೂ ಇಂದು ಬಂಗಾರಪೇಟೆ ವಿಜಯ ಚಿತ್ರಮಂದಿರದಲ್ಲಿ ರಾಜಕುಮಾರ್ ಚಿತ್ರದ ಉಚಿತ ಪ್ರದರ್ಶನವನ್ನು ಸಹ ಏರ್ಪಡಿಸಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾರಮಂಗಲ ಮುನಿರಾಜು, ನೇರಳೆಕೆರೆ ಚಿದಾನಂದ,ಬೈರೇಗೌಡ, ಮಧುಸೂದನ್, ಗೋಪಿ ಕಾರಹಳ್ಳಿ ಮಂಜು ಮೊದಲಾದವರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!