• Fri. Jul 26th, 2024

PLACE YOUR AD HERE AT LOWEST PRICE

ಬಂಗಾರಪೇಟೆ:ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿರುವ ಬಿಜೆಪಿಯನ್ನು 2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನ ತಿರಸ್ಕರಿಸಲಿದ್ದು, ಕಾಂಗ್ರೆಸ್ ಪಕ್ಷ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್  ಮುಖ್ಯಮಂತ್ರಿಗಳಾಗುವುದು ಖಚಿತ, ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು.

ಅವರು ತಾಲ್ಲೂಕಿನ ಕಾಮಸಮುದ್ರದ ಬಸ್ಸ್ ನಿಲ್ದಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿ,  ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಬಡವರ, ರೈತರ, ಕಾರ್ಮಿಕರ, ಮಹಿಳೆಯರ, ಅಲ್ಪಸಂಖ್ಯಾತ, ವಿರೋಧ ನೀತಿಗಳನ್ನು ಅನುಸರಿಸುತ್ತಿದೆ.

ಜಿ.ಎಸ್.ಟಿ. ಎಂಬ ಅವೈಜ್ಞಾನಿಕ ತೆರಿಗೆ ನೀತಿಯನ್ನು ಜಾರಿಗೆ ತಂದು ರಾಜ್ಯದ ಜನತೆಗೆ ಅನ್ಯಾಯ ಎಸಗಿದೆ,  ಇದರ ಪರಿಣಾಮ ಕೃಷಿ ಪರಿಕರಗಳು, ದಿನಬಳಕೆ ವಸ್ತುಗಳು, ಪೆಟ್ರೋಲ್, ಡೀಸೆಲ್, ಗ್ಯಾಸ್, ಬೆಲೆ ಗಗನಕ್ಕೇರಿದ್ದು, ಸಾರ್ವಜನಿಕರು ಕ್ಲಿಷ್ಟಕರವಾದ ಜೀವನವನ್ನು ನಡೆಸುವಂತಾಗಿದೆ ಎಂದು ಆರೋಪಿಸಿದರು.

ನರೇಂದ್ರ ಮೋದಿಯವರು ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ವಿದೇಶದಲ್ಲಿರುವ ಕಪ್ಪು ಹಣವನ್ನು ತಂದು ದೇಶದ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂಪಾಯಿ ಹಾಕುವುದಾಗಿ, ಒಂದು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ, ಸ್ಮಾರ್ಟ್ ಸಿಟಿಗಳನ್ನು ಮಾಡಿ ದೇಶವನ್ನು ಅಭಿವೃದ್ಧಿ ಮಾಡುವ ಟೊಳ್ಳು ಭರವಸೆ ನೀಡಿದ್ದರು.

ಆದರೆ ವಾಸ್ತವಿಕ ಸ್ಥಿತಿಗತಿಗಳು ಬೇರೆಯಾಗಿದ್ದು ನಿರುದ್ಯೋಗದ ಪ್ರಮಾಣ ತೀವ್ರಗತಿಯಲ್ಲಿ ಬೆಳೆಯುತ್ತಿದ್ದರೂ ಸರ್ಕಾರವು ಸರ್ಕಾರಿ ಸ್ವಾಮ್ಯದ ಅನೇಕ ಸಂಸ್ಥೆಗಳನ್ನು ಖಾಸಗಿಕರಣ ಮಾಡುವುದರ ಮೂಲಕ ಜನರನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡಲಾಗುತ್ತಿದೆ ಎಂದು ಾರೋಪ ಮಾಡಿದರು.

ಜೆಡಿಎಸ್ ಪಕ್ಷದಲ್ಲಿ ನಾಯಕರ ಕೊರತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾವಂತ ಯುವಕರಿಗೆ ಹಣದ ಆಮೀಷವನ್ನು ತೋರಿಸಿ ಮತ ಪ್ರಚಾರಕ್ಕೆ ದುರ್ಬಳಕೆ ಮಾಡಿಕೊಳ್ಳುವುದರ ಮೂಲಕ ಅವರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ, ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿಗಳಾಗಿದ್ದರೂ ಸಹ ಬಡವರ, ರೈತರ, ಬಗ್ಗೆ ಕಾಳಜಿ ವಹಿಸಲಿಲ್ಲ.

2018ರ ವಿಧಾನಸಭಾ ಚುನಾವಣೆಯಲ್ಲಿ ರೈತರ, ಮಹಿಳಾ ಸಂಘಗಳ ಸಾಲ ಮನ್ನಾ ಮಾಡುವುದಾಗಿ ಮತ್ತು 60 ವರ್ಷ ಮೇಲ್ಪಟ್ಟವರಿಗೆ 5000 ಪಿಂಚಿಣಿ ನೀಡುವುದಾಗಿ  ತಿಳಿಸಿದ್ದರೂ, ಇದರ ಜೊತೆಯಲ್ಲಿ ನಾಲ್ಕು ಬಾರಿ ಶಾಸಕರಾಗಿದ್ದ ಎಂ ನಾರಾಯಣಸ್ವಾಮಿ ಅವರು ಜೆಡಿಎಸ್ ಪಕ್ಷವನ್ನು ಬೆಂಬಲಿಸಿದ್ದ ಕಾರಣ ಬಂಗಾರಪೇಟೆ ಕ್ಷೇತ್ರದಲ್ಲಿ ಮಲ್ಲೇಶ್ ಬಾಬು ರವರು 38 ಸಾವಿರ ಮತಗಳನ್ನು ಪಡೆಯಲು ಸಾಧ್ಯವಾಯಿತು ಎಂದರು.

ಪ್ರಚಾರ ಸಮಿತಿ ಅಧ್ಯಕ್ಷ ರಘುನಾಥ್ ಮಾತನಾಡಿ ಇತ್ತೀಚಿಗೆ ಶಾಸಕರನ್ನು ಒಕ್ಕಲಿಗರ ವಿರೋಧಿ ಎಂದು ಪ್ರತಿಬಿಂಬಿಸಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ವಿಫಲಯತ್ನ ನಡೆಸುತ್ತಿದೆ. ಒಕ್ಕಲಿಗರು ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಆದಿನಾರಾಯಣಕುಟ್ಟಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿಚ್ಚಹಳ್ಳಿ ಗೋವಿಂದರಾಜು, ಮುಖಂಡರಾದ ಗೋಪಾಲರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜು, ತಾಪಂ ಮಾಜಿ ಅದ್ಯಕ್ಷ ಮಹದೇವಪ್ಪ. ಮುಖಂಡರಾದ ಲಕ್ಷ್ಮೀನಾರಾಯಣ ಪ್ರಸಾದ್, ಮೇಸ್ತ್ರಿಸೀನಪ್ಪ, ರಂಗನಾಥನಾಯ್ಡು,  ಚಂದ್ರಪ್ಪ, ಕುಪೇಂದ್ರ, ಸಂಪಂಗಿಗೌಡ, ರಾಮೇಗೌಡ, ಸೀತಾರಾಮಪ್ಪ, ಮಲ್ಲೇಶ್ ಗೌಡ, ಮೊದಲಾದವರಿದ್ದರು.

Leave a Reply

Your email address will not be published. Required fields are marked *

You missed

error: Content is protected !!