PLACE YOUR AD HERE AT LOWEST PRICE
ಬಂಗಾರಪೇಟೆ:ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಬಂದಿದ್ದ ಮಹಿಳೆ ಸಾವನ್ನಪ್ಪಿದ್ದು, ಘಟನೆಗೆ ವೈಧ್ಯರ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿ ಮೃತ ಮಹಿಳೆಯ ಕುಟುಂಬಸ್ತರು ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.
ಪಟ್ಟಣದ ಏ.ಕೆ ಕಾಲೋನಿ ನಿವಾಸಿ ಮಂಜುನಾಥ್ ಎಂಬುವರ ಪತ್ನಿ ಭಾರತಿರವರು ನೆನ್ನೆ ಹೆರಿಗೆಗೆ ಎಂದು ಬಂದಾಗ ಶಸ್ತ್ರ ಚಿಕಿತ್ಸೆ ಮಾಡಿ ಹೆರಿಗೆ ಮಾಡಿಸಿದ್ದಾರೆ. ಹೆರಿಗೆಯಾಗಿ ತಾಯಿಮಗು ಆರೋಗ್ಯವಾಗಿದ್ದರು.
ಆದರೆ ತಡರಾತ್ರಿ ಬಾನಂತಿ ಭಾರತಿಗೆ ಕಾಲು ನೋವು ಕಾಣಿಸಿಕೊಂಡಿದೆ. ನೋವು ನಿವಾರಣೆಗೆ ಚುಚ್ಚುಮದ್ದು ನೀಡಿದ ಪರಿಣಾಮ ಆರೋಗ್ಯದ ಸ್ಥಿತಿ ಬಾರಿ ಏರುಪೇರು ಆಗಿ ತಕ್ಷಣ ಕೋಲಾರದ ಖಾಸಗಿ ಆಸ್ಪತ್ರೆಗೆ ವೈದ್ಯರು ಕಳಿಸಿದ್ದಾರೆ.
ಕೋಲಾರಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ ಮಹಿಳೆ ಸಾವನಪ್ಪಿದ್ದಾರೆ. ವೈದ್ಯರ ನಿರ್ಲಕ್ಷವೇ ಸಾವಿಗೆ ಕಾರಣ ಎಂದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.
ಈ ಬಗ್ಗೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಆಕಸ್ಮಿಕ ಮರಣ ಪ್ರಕರಣದ ಬಗ್ಗೆ ವೈದ್ಯಕೀಯ ವರಧಿ ನಂತರ ಮುಂದಿನ ಕ್ರಮ ಕೈಗೊಳ್ಳುವ ಸೂಚನೆಯನ್ನು ಪೊಲೀಸರು ನೀಡಿದ್ದಾರೆಂದು ತಿಳಿದುಬಂದಿದೆ.