• Thu. May 16th, 2024

PLACE YOUR AD HERE AT LOWEST PRICE

ಕೆಜಿಎಫ್ ವಿಧಾನ ಸಭಾ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿ ಪಡಿಸುವ ಮೂಲಕ ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವಾಗಿ ಪರಿವರ್ತಿಸಲು ಕೈಜೋಡಿಸಿ ಎಂದು ಶಾಸಕಿ ಡಾ.ರೂಪಕಲಾ ಎಂ ಶಶಿಧರ್ ಮನವಿ ಮಾಡಿದರು.

ಅವರು ಬೇತಮಂಗಲ ಹೋಬಳಿಯ ಕ್ಯಾಸಂಬಳ್ಳಿ ಗ್ರಾಪಂಯ ವಿವಿಧ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಜನಾಶೀರ್ವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಕೆಜಿಎಫ್ ತಾಲ್ಲೂಕು ಬಂಗಾರಪೇಟೆ ತಾಲ್ಲೂಕಿನಿಂದ ವಿಂಗಡೆಣೆಯಾದ ಮೇಲೆ ಹೊಸ ತಾಲ್ಲೂಕಿಗೆ ಸಕಲ  ಸೌಲಭ್ಯಗಳನ್ನು ಕಲ್ಪಿಸಲು ಸಾಕಷ್ಟು ತೊಂದರೆಗಳನ್ನು ಏದುರಿಸಬೇಕಾಯಿತ್ತು.

ಕೆಜಿಎಫ್ ನಗರ ಹಾಗೂ ಗ್ರಾಮಾಂತರ ಭಾಗದ ಅಭಿವೃದ್ಧಿಗೆ ಸುಮಾರು 500ಕ್ಕೂ ಹೆಚ್ಚು ಕೋಟ್ಯಾಂತರ ಅನುದಾನ ತಂದು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ, ತಾಲ್ಲೂಕಿನ ಜನತೆ ನೀಡಿರುವ ಅವಕಾಶವನ್ನು ಜನತೆಯ ಸೇವೆ ಮಾಡಲು ನಿರಂತರವಾಗಿ ಶ್ರಮಿಸಿದ್ದೇನೆ ಎಂದರು.

ರಾಜ್ಯಕ್ಕೆ ಪ್ರಥಮ ಮುಖ್ಯ ಮಂತ್ರಿ ನೀಡಿರುವ ಕೆಸಿ ರೆಡ್ಡಿ ಅವರ ತಾಲ್ಲೂಕು ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳು ಮಾಡುವ ಕನಸು ಕಂಡಿದ್ದೇನೆ, ರಾಜ್ಯದಲ್ಲಿ ವಿರೋಧ ಪಕ್ಷದ ಸರಕಾರ ಇರುವುದರಿಂದ ಹೆಚ್ಚಿನ ಅನುದಾನ ತರಲು ಸಾಧ್ಯವಾಗಿಲ್ಲ, ಮುಂದಿನ ದಿನಗಳಲ್ಲಿ ಕ್ಷೇತ್ರದ ಜನತೆ  ಮತ್ತಷ್ಟು ಅಭಿವೃದ್ಧಿಗೆ ಅವಕಾಶ ಕಲ್ಪಿಸಬೇಕೆಂದರು.

ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ವಿಜಯರಾಘುವ ರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಕೃಷ್ಣರೆಡ್ಡಿ, ಮುಖಂಡರಾದ ಪದ್ಮನಾಭರೆಡ್ಡಿ, ವೆಂಕಟಕೃಷ್ಣರೆಡ್ಡಿ, ಸೊಸೈಟಿ ನಿರ್ದೇಶಕರಾದ ಪ್ರಕಾಶ್ ರೆಡ್ಡಿ, ಗ್ರಾಪಂ ಸದಸ್ಯರಾದ ಶ್ಯಾಮಲಮ್ಮ, ನರೇಂದ್ರರೆಡ್ಡಿ, ಯುವಮುಖಂಡ ವಿಕ್ಕಿರೆಡ್ಡಿ, ಶಿವಾರೆಡ್ಡಿ, ಒಬಿಸಿ ಮುನಿಸ್ವಾಮಿ, ವೆಂಕಟರಾಮ್ ರೆಡ್ಡಿ  ಮೊದಲಾದವರಿದ್ದರು.

Related Post

ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ
ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್

Leave a Reply

Your email address will not be published. Required fields are marked *

You missed

error: Content is protected !!