• Thu. May 16th, 2024

PLACE YOUR AD HERE AT LOWEST PRICE

ವಿಧಾನಸಭಾ ಕ್ಷೇತ್ರದಲ್ಲಿ ರಾಜ್ಯ ಪ್ರಗತಿಪರ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ದಲಿತ ಸಂಘಟನೆಗಳ ಬೆಂಬಲದೊಂದಿಗೆ ದಲಿತ ಅಭ್ಯರ್ಥಿ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ರಾಜ್ಯ ಪ್ರಗತಿಪರ ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಜಿ.ವೆಂಕಟಾಚಲಪತಿ ತಿಳಿಸಿದರು.

ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮೂರು ರಾಜಕೀಯ ಪಕ್ಷಗಳು ೭೦ ಸಾವಿರ ದಲಿತ ಮತದಾರರು ನಮ್ಮ ಕಡೆ ಇದ್ದಾರೆ ಎಂದು ತಿರುಗುತ್ತಾ ಇದ್ದಾರೆ ಯಾವುದೇ ರಾಜಕೀಯ ಪಕ್ಷಗಳು ದಲಿತ ಮುಖ್ಯಮಂತ್ರಿ ಘೋಷಿಸಿದೆ ದಲಿತರ ಮತಗಳು ಮಾತ್ರ ಬೇಕಾಗಿದೆ ಎನ್ನುವುದು ಎಷ್ಟು ಸರಿ ಎಂದರು.

ರಾಜಕೀಯವಾಗಿ ಅಕಾರ ಪಡೆಯಲು ರಾಜ್ಯದಲ್ಲೇ ಪ್ರಥಮ ಬಾರಿಗೆ ಸಾಮಾನ್ಯ ಕ್ಷೇತ್ರದಲ್ಲಿ
ಪ್ರಾಯೋಗಿಕವಾಗಿ ವಿದ್ಯಾವಂತ ಹಾಗೂ ಸಮಾಜ ಸೇವೆಯಲ್ಲಿ ತೊಡಗಿರುವ ದಲಿತ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಪ್ರಯತ್ನ ಮಾಡಲಾಗುತ್ತಿದೆ ದಲಿತ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ಈಗಾಗಲೇ ಸುಮಾರು ೨೦ ದಲಿತ ಸಂಘಟನೆಗಳು ಬೆಂಬಲ ಸೂಚಿಸಿದ್ದು,ಇನ್ನೂ ಮೂರು ದಿನಗಳಲ್ಲಿ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದೆಂದು ತಿಳಿಸಿದರು.

ದಲಿತ ಸಮಾಜ ಸೇನೆ ಅಧ್ಯಕ್ಷ ಸೂಲಿಕುಂಟೆ ಆನಂದ್ ಮಾತನಾಡಿ ರಾಜಕೀಯ ಪಕ್ಷಗಳು ಹೇಳಿಕೊಳ್ಳುವಂತೆ ದಲಿತ ಸಂಘಟನೆಗಳು ಹಾಗೂ ದಲಿತರು ಯಾವ ಪಕ್ಷಕ್ಕೂ ಮಾರಿಕೊಂಡಿಲ್ಲ ಹಾಗೂ ಅಗ್ರಿಮೆಂಟ್ ಮಾಡಿಲ್ಲ ದಲಿತ ಮುಖ್ಯಮಂತ್ರಿ ಮಾಡುವ ಗುರಿ ಹೊಂದಿರುವ ದಲಿತ ಸಂಘಟನೆಗಳು ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ದಲಿತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದೆಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಹಲವು ದಲಿತ ಸಂಘಟನೆಗಳ ಮುಖಂಡರುಗಳಾದ ಹುಣಸನಹಳ್ಳಿ ವೆಂಕಟೇಶ್, ಪಾರೆಹೊಸಹಳ್ಳಿ ರಮೇಶ್, ಮಾರ್ಜೇನಹಳ್ಳಿ ಮುನಿರಾಜು, ಮೇಡಿಹಾಳ ಮುನಿವೆಂಕಟಪ್ಪ, ಚದುಮನಹಳ್ಳಿ ಶ್ರೀರಾಮ್, ಸಿಂಗರಹಳ್ಳಿ ಕಿರಣ್ ಕುಮಾರ್, ಹೊಗರಿ ಭೀಮೇಶ್ ಇದ್ದರು.

 

Related Post

ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ
ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್

Leave a Reply

Your email address will not be published. Required fields are marked *

You missed

error: Content is protected !!