PLACE YOUR AD HERE AT LOWEST PRICE
ಕೋಲಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಕಾಂಗ್ರೆಸ್ ಭವನದಲ್ಲಿ ಹಸಿರು ಕ್ರಾಂತಿಯ ಹರಿಕಾರರದ ಡಾ.ಬಾಬು ಜಗಜೀವನರಾಮ್ ರವರ ೧೧೬ನೇ ಜನ್ಮಜಯಂತಿಯನ್ನು ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು.
ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ ಮಾತನಾಡಿ, ಡಾ.ಬಾಬು ಜಗಜೀವನರಾಂ ಅವರು ಯುವ ಪೀಳಿಗೆಗೆ, ರಾಜಕಾರಣಿಗಳಿಗೆ ಒಳ್ಳೆಯ ನಾಯಕನ ನೀತಿಗಳನ್ನು ಹೇಳಿಕೊಟ್ಟಂತಹ ಮಹಾನ್ ನಾಯಕರು. ಅವರ ಜಯಂತಿಯನ್ನು ಇಂದು ನಮ್ಮ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸುತ್ತಿದ್ದೇವೆ. ಅವರ ಮಾರ್ಗದರ್ಶನ ನಮ್ಮೆಲ್ಲರಿಗೂ ಅಗತ್ಯ. ಅವರ ಮಾರ್ಗದರ್ಶನದಲ್ಲಿ ನಾವೆಲ್ಲಾ ನಡೆಯುವಂತವರಾಗಬೇಕು. ರಕ್ಷಣಾ ಸಚಿವರಾಗಿ, ಕೃಷಿ ಸಚಿವರಾಗಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಅವರ ಹಾದಿಯಲ್ಲಿ ನಾವೆಲ್ಲಾ ಸಾಗೋಣ ಎಂದರು.
ಕಾಂಗ್ರೆಸ್ ಎಸ್ಸಿಘಟಕದ ಜಿಲ್ಲಾಧ್ಯಕ್ಷ ಕೆ.ಜಯದೇವ್ ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಅವರು ಈ ದೇಶದ ಎರಡು ಕಣ್ಣುಗಳಿದ್ದ ಹಾಗೆ. ಜಗಜೀವನರಾಮ್ ಎಂಟು ಬಾರಿ ಗೆದ್ದು ದೇಶಕ್ಕೆ ಮಾದರಿಯಾಗಿದ್ದರು. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಅವರ ಹಾದಿಯಲ್ಲಿ ಹಾಗೂ ಕೆ.ಹೆಚ್.ಮುನಿಯಪ್ಪ ರವರ ನೇತೃತ್ವದಲ್ಲಿ ನಾವೆಲ್ಲಾ ನಡೆಯೋಣ ಎಂದರು.
ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸಾದ್ಬಾಬು, ಉದಯಶಂಕರ್ ಎಸ್ಸಿ ಬ್ಲಾಕ್ ಅಧ್ಯಕ್ಷ ಗಂಗಮ್ಮನಪಾಳ್ಯ ರಾಮಯ್ಯ,ಎಸ್.ಟಿ ಬ್ಲಾಕ್ ಅಧ್ಯಕ್ಷ ರಮೇಶ್ ನಾಯಕ್, ಲಾಲ್ಬಹುದ್ದೂರು ಶಾಸ್ತ್ರಿ, ಖಾದ್ರಿಪುರ ಬಾಬು, ಶಿವು, ಒಬಿಸಿ ಉಪಾಧ್ಯಕ್ಷ ಶಿವಕುಮಾರ್, ಕಾರ್ಮಿಕ ಘಟಕದ ಯಲ್ಲಪ್ಪ, ಹಾರೋಹಳ್ಳಿ ರವಿ,ಜಗನ್ನಾಥ್ ಮತ್ತಿತರರಿದ್ದರು.