PLACE YOUR AD HERE AT LOWEST PRICE
ಬಂಗಾರಪೇಟೆ:ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ವಭಾವಿಯಾಗಿ ಜನರಲ್ಲಿನ ಆತಂಕವನ್ನು ದೂರ ಮಾಡಿ ಮುಕ್ತ ಮತದಾನಕ್ಕೆ ಅವಕಾಶ ಕಲ್ಪಿಸಿ ಧೈರ್ಯ ತುಂಬುವ ನಿಟ್ಟಿನಲ್ಲಿ “ಬಿ.ಎಸ್.ಎಫ್” ಸಹಯೋಗದಲ್ಲಿ ಪೊಲೀಸ್ ಇಲಾಖೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಸಿತು.
ಈ ವೇಳೆ ಕೆಜಿಎಫ್ ಪೊಲೀಸ್ ಅಧೀಕ್ಷಕರಾದ ಡಾ. ಧರಣಿ ದೇವಿ ಮಾತನಾಡಿ, ಬಲಿಷ್ಠ, ಸುಭದ್ರ ,ರಾಷ್ಟ್ರದ ಭವಿಷ್ಯವನ್ನು ರಚಿಸಲು ಮತದಾನ ಆಧಾರ ಸ್ತಂಭವಾಗಿದೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಮತದಾನ ಮಹತ್ವಪೂರ್ಣ ಪಾತ್ರ ನಿರ್ವಹಿಸುತ್ತದೆ. ಈ ನಿಟ್ಟಿನಲ್ಲಿ ಮತದಾರರು ನಿರ್ಭಯವಾಗಿ ಮುಕ್ತ ಮತದಾನ ಮಾಡಬೇಕು.
ಯಾವುದೇ ಆಮಿಷ ಬೆದರಿಕೆ ದಬ್ಬಾಳಿಕೆಗಳಿಗೆ ಭಯಪಡಬಾರದು ಜನತೆಗೆ ರಕ್ಷಣೆ ನೀಡಲು ಪೊಲೀಸ್ ಇಲಾಖೆ ಮತ್ತು ಬಿಎಸ್ಎಫ್ ಸದಾ ಬದ್ಧವಾಗಿರುತ್ತದೆ. ಆತಂಕ ಮುಕ್ತ ಮತದಾನ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಕೆಜಿಎಫ್ ಹಾಗೂ ಬಂಗಾರಪೇಟೆ ಕ್ಷೇತ್ರದಲ್ಲಿ ಮತದಾನದ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುತ್ತೇವೆಂದರು.
ಈ ಸಂದರ್ಭದಲ್ಲಿ ಡಿ.ವೈ.ಎಸ್.ಪಿ ವಿ.ಎಲ್.ರಮೇಶ್, ವೃತ್ತ ನಿರೀಕ್ಷಕ ಸಂಜೀವರಾಯಪ್ಪ ಹಾಗೂ ಸಿಬ್ಬಂದಿ ಹಾಜರಿದ್ದರು.