PLACE YOUR AD HERE AT LOWEST PRICE
ಬಂಗಾರಪೇಟೆ:ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಕಾಂಕ್ಷಿಗಳೆಲ್ಲಾ ಒಗ್ಗಟ್ಟಾಗಿದ್ದು ಪಕ್ಷದ ಕಾರ್ಯಕರ್ತರು ವದಂತಿಗಳಿಗೆ ಕಿವಿಗೊಡಬಾರದು ಎಂದು ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪ ಹೇಳಿದರು.
ಪಟ್ಟಣದ ಕೆಸಿಆರ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಈ ಬಾರಿ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸಲು ನಾವೆಲ್ಲಾ ಒಗ್ಗಟ್ಟಾಗಿ ಮತದಾರರ ಬಳಿ ಮತಯಾಚನೆಯನ್ನು ಆರಂಭಿಸಿದ್ದೇವೆ.
ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿಗಳಾಗಿರುವ ಬಿ.ವಿ.ಮಹೇಶ್, ವಿ.ಶೇಷು ಸೇರಿದಂತೆ ಎಲ್ಲರೂ ಸೇರಿ ಚರ್ಛಿಸಿ ಮಾಜಿ ಶಾಸಕ ಎಂ.ನಾರಾಯಣಸ್ವಾಮಿಗೆ ಟಿಕೆಟ್ ನೀಡಲು ಮತ್ತು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಅವರನ್ನು ಗೆಲ್ಲಿಸುತ್ತೇವೆ ಎಂದು ಹೈಕಮಾಂಡ್ ಗೆ ತಿಳಿಸಿದ್ದೇವೆ.
ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಸಂಸದ ಎಸ್.ಮುನಿಸ್ವಾಮಿ ಮುಖಂಡ ಕೆ.ಚಂದ್ರಾರೆಡ್ಡಿರ ಸಮ್ಮುಖದಲ್ಲಿ ನಾವೆಲ್ಲಾ ಒಗ್ಗಟ್ಟಾಗಿ ಬಿಜೆಪಿ ಗೆಲ್ಲಿಸುತ್ತೇವೆಂದು ಕೋಲಾರಮ್ಮನ ಮೇಲೆ ದೇವಾಲಯದಲ್ಲಿ ಆಣೆ ಮಾಡಿದ್ದೇವೆ.
ಯಾರೋ ದುರುದ್ದೇಶದಿಂದ ಹಬ್ಬಿಸುವ ವದಂತಿಗಳ ಬಗ್ಗೆ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ತಲೆಕೆಡಿಸಿಕೊಳ್ಳಬಾರದು. ನಾವೆಲ್ಲಾ ಒಟ್ಟಿಗೆ ಚುನಾವಣಾ ಪ್ರಚಾರ ಮಾಡಲು ಆರಂಭಿಸಿದ್ದೇವೆಂದರು.
ಈ ವೇಳೆ ಮಾಜಿ ಶಾಸಕ ಎಂ.ನಾರಾಯಣಸ್ವಾಮಿ, ಜಿಪಂ ಮಾಜಿ ಸದಸ್ಯ ಬಿ.ವಿ.ಮಹೇಶ್, ಬಿಜೆಪಿ ಅದ್ಯಕ್ಷ ನಾಗೇಶ್, ಮುಖಂಡರಾದ ಹೊಸರಾಯಪ್ಪ, ಮಾರ್ಕಂಡೇಗೌಡ, ಶಶಿಕುಮಾರ್, ಪಾರ್ಥಸಾರತಿ, ಸಂಪಂಗಿರೆಡ್ಡಿ, ಸರಸ್ವತಮ್ಮ ಮೊದಲಾದವರಿದ್ದರು.