• Mon. Apr 29th, 2024

PLACE YOUR AD HERE AT LOWEST PRICE

ಬಂಗಾರಪೇಟೆ:ಕಾಂಗ್ರೆಸ್ ಪಕ್ಷದ ಬಂಗಾರಪೇಟೆ ತಾಲ್ಲೂಕು ಎಸ್.ಸಿ ಘಟಕದ ಅಧ್ಯಕ್ಷರಾಗಿ ಅ.ನಾ ಹರೀಶ್ ಅವರು ಆಯ್ಕೆ ಮಾಡಿರುವುದು ಬಹಳ ಸಂತೋಷದ ವಿಷಯವಾಗಿದೆ ಎಂದು ಸೂಲಿಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಯಲ್ಲಯ್ಯ ಹೇಳಿದರು.

ಪಟ್ಟಣದ ಅಂಬೇಡ್ಕರ್ ಪುತ್ತಳಿ ಬಳಿ ಎಸ್.ಸಿ ಘಟಕ್ಕೆ ನೂತನವಾಗಿ ಆಯ್ಕೆಯಾಗಿರುವ ಅ.ನಾ.ಹರೀಶ್ ರನ್ನು ಅಭಿನಂದಿಸಿ ಅವರು ಮಾತನಾಡಿ, ಆಯ್ಕೆ ಮಾಡಿದ ಪಕ್ಷದ ನಾಯಕರಿಗೆ ಮತ್ತು ಶಾಸಕ ಎಸ್.ಎನ್. ನಾರಾಯಣಸ್ವಾಮಿರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಬಂಗಾರಪೇಟೆ ಎಸ್.ಸಿ ಘಟಕದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹರೀಶ್ ಅವರು ಪಕ್ಷ ಸಂಘಟನೆಯನ್ನು ಹೆಚ್ಚಿಗೆ ಮಾಡಿ ಇನ್ನೂ ಉತ್ತಮ ಮಟ್ಟಕ್ಕೆ ಬೆಳೆದು ತಾಲೂಕಿನಲ್ಲಿ ಉತ್ತಮ ಕೆಲಸಗಳನ್ನು ಮಾಡಲಿ ಎಂದು ಹಾರೈಸಿದರು.

ಚಿಕ್ಕಅಂಕಂಡಳ್ಳಿ ಗ್ರಾಪಂ ಅಧ್ಯಕ್ಷ ಎಚ್.ಎಂ.ರವಿ, ಬಂಗಾರಪೇಟೆ ಎಸ್ ಸಿ ಘಟಕದ ನೂತನ ಅಧ್ಯಕ್ಷ ಹರೀಶ್ ಮಾತನಾಡಿ ಆಯ್ಕೆಗೆ ಸಹಕರಿಸಿದ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಮತ್ತು ಜಿಲ್ಲಾಧ್ಯಕ್ಷರಾದ ಜಯದೇವ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಶ್ರೀನಿವಾಸ್, ಉಪೇಂದ್ರ, ಮುನೆಂದ್ರ ಇನ್ನೂ ಅನೇಕರು ಇದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!