• Thu. May 2nd, 2024

PLACE YOUR AD HERE AT LOWEST PRICE

ರಾಜ್ಯದ ಹಿರಿಯ ಕಾಂಗ್ರೆಸ್ ವಾಗ್ಮಿ ಹಾಗೂ ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಸಕ್ರಿಯ ರಾಜಕಾರಣಕ್ಕೆ ವಿದಾಯ ಘೋಷಿಸಿದ್ದಾರೆ.

ಕೋಲಾರ ನಗರದಲ್ಲಿ ಶನಿವಾರ ವಿಧಾಯ ಘೋಷಣೆ ಮಾಡಿದ್ದಾರೆ. ಸುಮಾರು ಮೂರು ದಶಕಗಳಿಗೂ ಹೆಚ್ಚಿನ ಅವಧಿಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ಸಕ್ರಿಯ ರಾಜಕಾರಣದಲ್ಲಿ ತೊಡಿಗಿಸಿಕೊಂಡಿದ್ದ ವಿ.ಆರ್.ಸುದರ್ಶನ್, ೨೦೨೩ರ ವಿಧಾನ ಸಭಾ ಚುನಾವಣೆಗೆ ಕೋಲಾರ ಕ್ಷೇತ್ರ ಕಾಂಗ್ರೆಸ್ ಆಕಾಂಕ್ಷಿ ಯಾಗಿದ್ದರು, ಇದೀಗ ಏಕಾಏಕಿ ಸಕ್ರಿಯ ರಾಜಕಾರಣದಿಂದ ದೂರ ಉಳಿಯುವ ನಿರ್ಧಾರ ತೆಗೆದುಕೊಂಡಿರುವುದಾಗಿ ಘೋಷಸಿರುವುದು ಸಾರ್ವಜನಿಕ ವಲಯದಲ್ಲಿ ಅಚ್ಚರಿ ಮೂಡಿಸಿದೆ.

ಕಾಂಗ್ರೆಸ್ ಪಕ್ಷದ ಹೋರಾಟಗಳು ಹಾಗೂ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಾಗಿ ಹೇಳಿರುವ ಅವರು, ಈ ಬಗ್ಗೆ ಹೆಚ್ಚಿನ ವಿವರಗಳನ್ನು ಏಪ್ರಿಲ್ ೨೬ರ ನಂತರ ತಿಳಿಸುವುದಾಗಿ ಹೇಳಿದ್ದಾರೆ. ಕೋಲಾರ ಕ್ಷೇತ್ರಕ್ಕೆ ಆಕಾಂಕ್ಷಿಯಾಗಿದ್ದವರು ಹೀಗೇ ಧಿಡೀರೆಂದು ರಾಜಕೀಯಕ್ಕೆ ಗುಡ್ ಬೈ ಹೇಳಿದ್ದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ಅಹಿಂದ ಚಳುವಳಿಯ ಮೂಲಕ ಜಿಲ್ಲೆಯ ಪ್ರಮುಖ ಹೋರಾಟಗಾರರಾಗಿ ಹೊರಹೊಮ್ಮಿದ ಸುದರ್ಶನ್ ರವರು, ಜಿಲ್ಲೆಯ ರಾಜಕಾರಣಿಗಳಲ್ಲಿ ಅತ್ಯುನ್ನತ ವಾಗ್ಮಿ ಎಂದೇ ಗುರತಿಸಲಾಗುತ್ತಿದ್ದ ಸರಳ ಸಜ್ಜನಿಕೆಯ ರಾಜಕಾರಣಿಯಾಗಿದ್ದವರು. ಇವರ ಮೂರು ದಶಕಗಳ ರಾಜಕೀಯ ಬದುಕಿನಲ್ಲಿ ಪಕ್ಷದಿಂದ ಪಕ್ಷಕ್ಕೆ ವಲಸೆ ಹೋಗದೆ. ಸಿಕ್ಕ ಅವಕಾಶಗಳನ್ನೇ ಸದ್ಬಳಿಸಿಕೊಂಡು ಜಿಲ್ಲೆಗೆ ಕೀರ್ತಿಯನ್ನು ತಂದವರು.

ರಾಜಕೀಯ ಆಮಿಷಗಳಿಗೆ ಬಲಿಯಾಗದೆ ಸಮಾಜವಾದಿ ಚಿಂತನೆಗಳನ್ನು ಮೈಗೂಡಿಸಿಕೊಂಡಿದ್ದ ಇವರು ಯಾವುದೇ ಇತರೆ ಪಕ್ಷಗಳೊಂದಿಗೆ ವಿರೋಧ ಕಟ್ಟಿಕೊಳ್ಳದ ಅಜಾತಶತ್ರುವಾಗಿ ತಮ್ಮ ಸೈದ್ಧಾಂತಿಕ ಚಿಂತನೆಗಳನ್ನೇ ನಂಬಿಕೊoಡು ರಾಜಕಾರಣ ಮಾಡಿದವರು, ಕರ್ನಾಟಕ ಸರ್ಕಾರದ ವಿಧಾನಪರಿಷತ್ ಸಭಾಪತಿಯಾಗಿ ಉತ್ತಮ ಕಾರ್ಯನಿರ್ವಹಿಸಿದ ಕೀರ್ತಿ ಇವರದ್ದು.

ಚುನಾವಣಾ ಸಂದರ್ಭದಲ್ಲಿ ಇದ್ದಕ್ಕಿದ್ದಮತೆ ಇವರ ರಾಜಕೀಯ ವಿಧಾಯ ಜಿಲ್ಲಾ ಕಾಂಗ್ರೆಸ್ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂದು ಕಾದುನೋಡಬೇಕು.

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!