PLACE YOUR AD HERE AT LOWEST PRICE
ಅಂಬೇಡ್ಕರ್ ಜಯಂತಿ ನಡೆದ ಮಾರನೇ ದಿನವೇ ಅಂಬೇಡ್ಕರ್ ನಾಮ-ಲಕದ ಭಾವಚಿತ್ರಕ್ಕೆ ಮಸಿ ಬಳಿದಿರುವ ಘಟನೆ ತಾಲೂಕಿನ ದಿನ್ನೇಹೊಸಹಳ್ಳಿ ಯಲ್ಲಿ ಜರುಗಿದೆ.
ಕೋಲಾರ ತಾಲೂಕಿನ ನರಸಾಪುರ ಹೋಬಳಿಯ ದಿನ್ನೆಹೊಸಹಳ್ಳಿಯಲ್ಲಿ ಅಂಬೇಡ್ಕರ್ ಭಾವಚಿತ್ರವುಳ್ಳ ನಾಮ-ಲಕವನ್ನು ಹಾಕಲಾಗಿತ್ತು. ಈ ನಾಮ-ಲಕದ ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳು ಮಸಿ ಬಳಿಸಿದ್ದಾರೆ.
ಈ ಘಟನೆಯನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ನಾಗನಾಳ ಮುನಿಯಪ್ಪ ತೀವ್ರವಾಗಿಖಂಡಿಸಿದ್ದು, ಅಂಬೇಡ್ಕರ್ ಭಾವಚಿತ್ರಕ್ಕೆ ಮಸಿ ಬಳಿದು ಅಪಮಾನ ಮಾಡಿರುವ ಕಿಡಿಗೇಡಿಗಳು ಯಾರೇ ಆಗಿರಲಿ ಪತ್ತೆ ಹಚ್ಚಿ ಬಂಽಸಿ ಆರೋಪಿಗಳನ್ನು ಜಿಲ್ಲೆಯಿಂದ ಗಡೀಪಾರು ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಹಳ್ಳಿಗಳಲ್ಲಿರುವ ಶಾಂತಿ ಸುವ್ಯವಸ್ಥೆಯನ್ನು ಹಾಳು ಮಾಡುವಂತ ಕಿಡಿಗೇಡಿ ಕೃತ್ಯಗಳನ್ನು ಮುಂಜಾಗ್ರತಾ ಕ್ರಮವಾಗಿ ತಡೆಯಬೇಕು, ಇಂತ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಜೈಲಿಗಟ್ಟಬೇಕೆಂದು ಅವರು ಜಿಲ್ಲಾಽಕಾರಿ ಹಾಗೂ ಪೊಲೀಸ್ ವರಿಷ್ಠಾಽಕಾರಿಗಳನ್ನು ಒತ್ತಾಯಿಸಿದ್ದಾರೆ.