• Tue. May 14th, 2024

PLACE YOUR AD HERE AT LOWEST PRICE

ಕೋಲಾರ ಜಿಲ್ಲೆಯಲ್ಲಿ ೨೦೨೨-೨೩ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದ ರೈತರಿಂದ ಪ್ರತಿ ಕ್ವಿಂಟಾಲ್‌ಗೆ ರೂ.೩,೫೭೮ ರಂತೆ ರಾಗಿ ಖರೀದಿ ಮಾಡುವ ಅವಧಿಯನ್ನು ಏ.೩೦ ೨೦೨೩ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ವ್ಯವಸ್ಥಾಪಕ ಮನೋಗರನ್ ಹೇಳಿದರು.

ಈ ಸಂದರ್ಭದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರಾಗಿ ಖರೀದಿ ಪ್ರಕ್ರಿಯೆಯು ಇದೇ ಮಾರ್ಚ್ ೩೧ಕ್ಕೆ ಮುಕ್ತಾಯಗೊಳ್ಳಬೇಕಾಗಿರುತ್ತದೆ. ಆದರೆ ಕೇಂದ್ರ ಸರ್ಕಾರವು ನಿಗಧಿಪಡಿಸಿರುವ ಗುರಿಯನ್ನು ಸಾಧಿಸದೇ ಇರುವ ಕಾರಣದಿಂದಾಗಿ ಕೇಂದ್ರ ಸರ್ಕಾರವು ರಾಜ್ಯದ ರೈತರ ಹಿತದೃಷ್ಠಿಯಿಂದ ಈಗಾಗಲೇ ರಾಗಿಯನ್ನು ಮಾರಾಟ ಮಾಡಲು ನೋಂದಣಿ ಮಾಡಿಕೊಂಡಿರುವ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಯ ಅವಧಿಯನ್ನು ೩೦ ಏಪ್ರಿಲ್ ೨೦೨೩ರವರೆಗೆ ವಿಸ್ತರಿಸಿದೆ ಹಾಗೂ ರಾಗಿ ಖರೀದಿ ಪ್ರಕ್ರಿಯೆಯನ್ನು ಏಪ್ರಿಲ್ ೩೦ ರೊಳಗಾಗಿ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಆದೇಶಿಸಿದೆ ಎಂದರು.

ರಾಗಿ ಬೆಳೆ ಬೆಳೆದ ಪ್ರತಿ ರೈತರಿಂದ ಪ್ರತಿ ಎಕರೆಗೆ ಕನಿಷ್ಠ ೧೦ ಕ್ವಿಂಟಲ್‌ನಂತೆ ಗರಿಷ್ಟ ೨೦ ಕ್ವಿಂಟಲ್‌ವರೆಗೆ ರಾಗಿಯನ್ನು ಖರೀದಿಸಲಾಗುತ್ತಿದೆ, ರೈತ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಕೃಷಿ ಇಲಾಖೆಯಿಂದ ಫ್ರೂಟ್ಸ್ ಐಡಿಯನ್ನು(ಈIಆ) ಪಡೆದು ನೋಂದಾಯಿಸಿಕೊಳ್ಳಬೇಕು. ಸರ್ಕಾರ ನಿಗಧಿಪಡಿಸಿರುವ ಮಾನದಂಡವನ್ನು ಅನುಸರಿಸಿ ಎಫ್.ಎ.ಕ್ಯೂ. ಗುಣಮಟ್ಟದ ಉತ್ಪನ್ನವನ್ನು ಖರೀದಿ ಕೇಂದ್ರಗಳಲ್ಲಿ ಖರೀದಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಈ ಬಾರಿ ಸರ್ಕಾರ ರೈತರಿಗೆ ಚೀಲದ ಹೊರೆಯಾಗದಂತೆ ಸರ್ಕಾರ ಟೆಂಡರ್ ಕರೆದು ಖರೀದಿ ಕೇಂದ್ರಕ್ಕೆ ನೀಡಿರುವ ಚೀಲಗಳಿಗೆ ನೀವು ನೀಡುವ ರಾಗಿಯನ್ನು ತುಂಬಿಸಿ ನಿಮ್ಮ ಚೀಲಗಳನ್ನು ನಿಮಗೆ ವಾಪಸ್ ನೀಡುತ್ತೇವೆ ಇದರಿಂದ ನಿಮಗೆ ಚೀಲಗಳು ಕೊಳ್ಳುವ ದುಡ್ಡು ಉಳಿಯುತ್ತದೆ. ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕೋರಿದ್ದಾರೆ.

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!