• Tue. Apr 30th, 2024

PLACE YOUR AD HERE AT LOWEST PRICE

ಕೆಜಿಎಫ್ ನಲ್ಲಿ ಬಿಜಿಎಂಎಲ್ ಗೆ ಸೇರಿದ 3600 ಎಕರೆ ಜಾಗದಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಿಸುವ ಬಗ್ಗೆ ಪರಿಗಣಿಸಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಉನ್ನತ ಪ್ರಾಧಿಕಾರವನ್ನು ಮನವಿ ಮಾಡಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅದ್ಯಕ್ಷತೆಯಲ್ಲಿ ದೆಹಲಿಯಲ್ಲಿ ನೆನ್ನೆ ನಡೆದ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಮತ್ತು ಅನುಷ್ಟಾನ ಟ್ರಸ್ಟ್ (ಎನ್ ಐ ಸಿ ಡಿ ಐ ಟಿ) ಉನ್ನತ ಮಟ್ಟದ ಮೇಲ್ವಿಚಾರಣಾ ಪ್ರಾಧಿಕಾರದ ಸಭೆಯಲ್ಲಿ ವಿಡಿಯೋ ಕಾನ್ಫ್ ರೆನ್ಸ್ ಮೂಲಕ ಸಚಿವರು ಮಾತನಾಡಿ ಮನವಿ ಮಾಡಿದ್ದಾರೆ.

ಶೀಘ್ರವೇ ಈ ಸಂಬಂಧ ಪ್ರಾಧಿಕಾರಕ್ಕೆ ಕರ್ನಾಟಕ ರಾಜ್ಯ ಸರ್ಕಾರವು ಪ್ರಸ್ಥಾವನೆ ಸಲ್ಲಿಸಲಿದೆ. ಈ ಕಾರ್ಯಯೋಜನೆ ಜಾರಿಯಾದರೆ ಚೆನ್ನೈ_ಬೆಂಗಳೂರು ಕೈಗಾರಿಕಾ ಕಾರಿಡಾರ್ ನ ಪ್ರಮುಖ ವಿಷಯಗಳಲ್ಲಿ ಒಂದಾಗುವ ಜೊತೆಗೆ ಹೆಚ್ಚಿನ ಉದ್ಯೋಗಗಳನ್ನು ಸೃಷ್ಠಿಸಲಿದೆ ಎಂದು ಅಭಿಪ್ರಾಯಪಟ್ಟರು.

ಸಚಿವ ಎಂ.ಬಿ ಪಾಟೀಲ್ ಮಾಡಿದ ಈ ಪ್ರಸ್ಥಾಪಕ್ಕೆ ಸಭೆಯಲ್ಲಿ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಇದಕ್ಕೆ ಸಂಬಂಧಿಸಿ ವಿವರಗಳೊಂದಿಗೆ ಪ್ರಸ್ಥಾವನೆ ಸಲ್ಲಿಸುವಂತೆ ಸೂಚಿಸಿದರು ಎಂದು ವರದಿಯಾಗಿದೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!