PLACE YOUR AD HERE AT LOWEST PRICE
ಕೆಜಿಎಫ್:ವಿಧಾನಸಭಾ ಚುನಾವಣೆಯ ಮುನ್ನ ಕಾಂಗ್ರೆಸ್ ಪಕ್ಷದ ಜನತೆಗೆ ನೀಡಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದರಲ್ಲಿ ಯಾವುದೇ ಅನುಮಾನ ಇಲ್ಲ. ಹಂತ ಹಂತವಾಗಿ ಎಲ್ಲವೂ ಜಾರಿಯಾಗಲಿದೆ ಎಂದು ಶಾಸಕಿ ರೂಪಕಲಾ ಶಶಿಧರ್ ಹೇಳಿದರು.
ತಾಲ್ಲೂಕಿನ ಎನ್.ಜಿ.ಹುಲ್ಕೂರು ಗ್ರಾಪಂಯ ಹಲವು ಗ್ರಾಮಗಳಿಗೆ ತಾಲ್ಲೂಕು ಮಟ್ಟದ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಜನ ಸಮಾನ್ಯ ಸಮಸ್ಯೆಗಳನ್ನು ವಿವರಿಸಿ ಮಾತನಾಡಿ, ಈಗಾಗಲೇ ಜೂ.11ರಿಂದ ರಾಜ್ಯದ ಎಲ್ಲಾ ಕಡೆಯೂ ಸರ್ಕಾರಿ ಬಸ್ಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಣೆ ಮಾಡಲಾಗಿದೆ.
ಅದೇ ರೀತಿ ಜುಲೈ 01 ರಿಂದ ಪ್ರತಿ ಕುಟುಂಬಕ್ಕೂ ತಲಾ 10 ಕೆ.ಜಿ.ಅಕ್ಕಿಯನ್ನು ಉಚಿತವಾಗಿ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿದೆ, ಆಗಸ್ಟ್ ತಿಂಗಳಲ್ಲಿ ಮಹಿಳೆಯರ ಖಾತೆಗೆ 2 ಸಾವಿರ ಬರುವುದಕ್ಕೂ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದರು.
ಬಿಜೆಪಿ ಸರ್ಕಾರದಲ್ಲಿ 3 ವರ್ಷಗಳಿಂದ ಯಾರಿಗೂ ಮನೆಗಳು ಮಂಜೂರು ಆಗಲಿಲ್ಲ, ಈಗ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ ಶೀಘ್ರದಲ್ಲಿಯೇ ಹೆಚ್ಚು ಮನೆಗಳನ್ನು ಮಂಜೂರು ಮಾಡಿಸಿ ಬಡವರಿಗೆ ವಸತಿ ಭಾಗ್ಯ ಕಲ್ಪಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಅ.ಮು.ಲಕ್ಷ್ಮೀನಾರಾಯಣ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಕೃಷ್ಣರೆಡ್ಡಿ, ವಕೀಲ ಪದ್ಮನಾಭರೆಡ್ಡಿ, ಎನ್ಟಿಆರ್ ಶ್ರೀನಿವಾಸ್ ರೆಡ್ಡಿ, ಸುವರ್ಣಹಳ್ಳಿ ಕೃಷ್ಣಮೂರ್ತಿ, ತಾಪಂ ಮಾಜಿ ಸದಸ್ಯ ನಾರಾಯಣಪ್ಪ, ಗ್ರಾಪಂ ಅಧ್ಯಕ್ಷರುಗಳಾದ ರಾಂಬಾಬು, ಕಮ್ಮಸಂದ್ರ ಸುರೇಶ್, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಪ್ರಭಾಕರ್, ನಾರಾಯಣಸ್ವಾಮಿ, ಪಟ್ಟಾಭಿ, ಹಂಗಳ ರಮೇಶ್, ಬಾಬು, ಇಓ ಮಂಜುನಾಥ್, ಪಿಡಿಓ ಮಹೇಶ್, ಏಜಾಜ್ ಪಾಷ, ವಸಂತ್ ರೆಡ್ಡಿ, ವಿಶ್ವನಾಥ್ ಮೊದಲಾದವರಿದ್ದರು.