• Fri. Apr 19th, 2024

PLACE YOUR AD HERE AT LOWEST PRICE

ಕೋಲಾರ ನಗರದ ಮೆಥೋಡಿಸ್ಟ್ ಚರ್ಚ್ ನಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಅಡ್ಡಿ ಪಡಿಸಿ ಶಾಂತಿ ಭಂಗ ಮಾಡುವ ಪ್ರಾಂಕ್ಲಿನ್ ಡಿಸೋಜ ಅವರನ್ನು ಕಾನೂನು ರೀತಿಯಲ್ಲಿ ಕ್ರಮ ಕೈಗೊಂಡು ನಮಗೆ ನ್ಯಾಯ ಕೊಡಿಸುವಂತೆ ಕ್ರೈಸ್ತ ಸಮುದಾಯದ ಮುಖಂಡರು ಬುಧವಾರ ನಗರದಲ್ಲಿ ತಹಶಿಲ್ದಾರ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈಗಾಗಲೇ ಫ್ರಾಂಕ್ಲಿನ್ ಡಿಸೋಜ ಅವರ ಮೇಲೆ ಸಾಕಷ್ಟು ಪ್ರಕರಣಗಳು ದಾಖಲಾಗಿದ್ದು ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುತ್ತಾ ಇರುವ ವ್ಯಕ್ತಿಯಾಗಿದ್ದು ಚರ್ಚ್ ನಲ್ಲಿ ನಡೆಯುವ ಪ್ರತಿಯೊಂದು ಕಾರ್ಯ ಚಟುವಟಿಕೆಗಳಿಗೆ ಅಡ್ಡಿ ಪಡಿಸಿದ್ದಾರೆ ಜೊತೆಗೆ ಆಡಳಿತ ಮಂಡಳಿಯ ಸದಸ್ಯರನ್ನು ವಜಾ ಮಾಡತ್ತೇನೆ ಎಂದು ಧಮ್ಕಿ ಹಾಕಿದ್ದಾನೆ ಸರ್ವಾಽಕಾರಿ ಧೋರಣೆಯಿಂದ ತುಂಬಾ ತೊಂದರೆ ಹಾಗೂ ಕಿರುಕುಳ ನೀಡುವ ವ್ಯಕ್ತಿಯನ್ನು ಕೂಡಲೇ ಬಂಽಸಿ ಶಾಂತಿ ಕಾಪಾಡುವಂತೆ ಒತ್ತಾಯಿಸಿದರು.

ಮೆಥೋಡಿಸ್ಟ್ ಚರ್ಚ್ ಮೊದಲಿನಿಂದಲೂ ಶಾಂತಿ ಹಾಗೂ ನೆಮ್ಮದಿಯ ಸಂಕೇತವಾಗಿದ್ದು ಇಂತ ಚರ್ಚ್ ನಲ್ಲಿ ಅಶಾಂತಿ ತರುವ ಫ್ರಾಂಕ್ಲಿನ್ ಡಿಸೋಜ ಅವರನ್ನು ಕಾನೂನು ರೀತಿಯಲ್ಲಿ ಕ್ರಮ ಕೈಗೊಂಡು ಮುಂದೆ ನಡೆಯವ ಪ್ರತಿಯೊಂದು ಕಾರ್ಯಕ್ರಮಗಳಿಗೆ ರಕ್ಷಣೆ ಕೊಡುವಂತೆ ತಹಶಿಲ್ದಾರ್ ಅವರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕ್ರೈಸ್ತ ಮುಖಂಡರಾದ ಟಿ.ಎಸ್ ಸುಧೀರ್‌ಕುಮಾರ್, ದೇವಕುಮಾರ್, ಬಾಬು, ನಿರ್ಮಲ್ ಕುಮಾರ್, ಮುಂತಾದವರು ಇದ್ದರು.

Related Post

ಶೇ.೯೦ ರಷ್ಟು ದೇಶದ ಸಮುದಾಯಗಳು ಮುಖ್ಯವಾಹಿನಿ ಮಾದ್ಯಮಗಳಲ್ಲಿ, ಕಾರ್ಪೋರೇಟ್ ವಿಭಾಗದಲ್ಲಿ ಮತ್ತು ಅತ್ಯುನ್ನತ ಸರ್ಕಾರಿ ಹುದ್ದೆಗಳಲ್ಲಿ ಭಾಗವಹಿಸುವಿಕೆ ಇಲ್ಲ! : ರಾಹುಲ್ ಗಾಂಧಿ
ರಾಜಕೀಯ ಪಕ್ಷಗಳು ಪರಿಶಿಷ್ಟ ಜಾತಿಯ ಬಲಗೈ ಸಮುದಾಯಕ್ಕೆ ಅನ್ಯಾಯ ಮಾಡಿವೆ : ಸಮುದಾಯ ಮುಖಂಡರ ಆಕ್ರೋಶ,
ಸಂವಿಧಾನ ಉಳಿಸಲು ದೇಶದ ಸಮಗ್ರತೆ ಕಾಪಾಡಲು ಬಿಜೆಪಿಯನ್ನು ಸೋಲಿಸಿ: ಮಂಜುನಾಥ್ ಅಣ್ಣಯ್ಯ

Leave a Reply

Your email address will not be published. Required fields are marked *

You missed

error: Content is protected !!