• Sat. Apr 27th, 2024

PLACE YOUR AD HERE AT LOWEST PRICE

ಕೆಜಿಎಫ್:ರಾಮಸಾಗರ ಗ್ರಾಪಂಯ ವ್ಯಾಪ್ತಿಯ ಕೂಳೂರು ಗ್ರಾಮದ ಶ್ರೀ ರುಕ್ಮಿಣಿ ಸತ್ಯಭಾಮ ಸಮೇತ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದ ಜೀರ್ಣೋದ್ಧಾರ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.

ಕೂಳೂರು ಗ್ರಾಮದಲ್ಲಿ ಶ್ರೀ ವೇಣುಗೋಪಾಲಸ್ವಾಮಿ ದೇಗುಲವನ್ನು ಗ್ರಾಮಸ್ಥರು ಹಾಗೂ ದಾನಿಗಳ ಸಹಕಾರದಿಂದ ಸಂಪೂರ್ಣ ಕಲ್ಲಿನಿಂದ ನಿರ್ಮಿಸಿರುವ ದೇಗುಲವು ಮೂರು ದಿನಗಳಿಂದ ಗ್ರಾಮದಲ್ಲಿ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಜೀರ್ಣೋದ್ಧಾರ ನಡೆಯಿತು.

ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದ ಜೀರ್ಣೋದ್ಧಾರ, ಮಹಾ ಸಂಪ್ರೋಕ್ಷಣೆ, ಕುಂಬಾಭಿಷೇಕ ಮಹೋತ್ಸವ, ಆಗಮಶಾಸ್ತ್ರದ ಧಾರ್ಮಿಕ ಕಾರ್ಯಗಳು ಹಾಗೂ ಶ್ರೀ ಗಣಪತಿ ದೇವಸ್ಥಾನದ ಕುಂಬಾಭಿಷೇಕ, ಕಲಶ ಸ್ಥಾಪನೆ, ವಾಸ್ತು ಹೋಮ, ಅಗ್ನಿ ಪ್ರತಿಷ್ಠಾಪನೆ, ವಿಶೇಷ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಪುರೋಹಿತರ ತಂಡದಿಂದ ನೆರವೆರಿತು.

ದೇಗುಲ ಜೀರ್ಣೋದ್ಧಾರದ ಪ್ರಯುಕ್ತ ಗ್ರಾಮವನ್ನು ವಿದ್ಯುತ್ ದೀಪಗಳಿಂದ ಹಸಿರು ತೋರಣಗಳಿಂದ ಅಲಂಕಾರ ಮಾಡುವ ಮೂಲಕ ಹಬ್ಬದ ವಾತವರಣ ನಿರ್ಮಾಣವಾಗಿತ್ತು, ಮೂರು ದಿನಗಳ ಜೀರ್ಣೋದ್ದಾರದ ಹಿನ್ನಲೆ ಭಕ್ತಿ ಗೀತೆ, ಸಂಗೀತ ಕಾರ್ಯಕ್ರಮಗಳನ್ನು ಅಯೋಜನೆ ಮಾಡಲಾಗಿತ್ತು.

ದೇಗುಲ ಜೀರ್ಣೋದ್ಧಾರದಲ್ಲಿ ಕೋಚಿಮುಲ್ ನಿರ್ದೇಶಕ ಜಯಸಿಂಹ ಕೃಷ್ಣಪ್ಪ, ಜಿಪಂ ಮಾಜಿ ಸದಸ್ಯ ಜಯಪ್ರಕಾಶ್ ನಾಯ್ಡು, ಸಮಾಜ ಸೇವಕ ವಿ.ಮೋಹನ್ ಕೃಷ್ಣ ಸೇರಿದಂತೆ ದಾನಿಗಳು, ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ನೂರಾರೂ ಭಕ್ತರು ಭೇಟಿ ನೀಡಿ ದೇವರ ಅಶೀರ್ವಾದ ಪಡೆದಕೊಂಡರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!