• Thu. May 16th, 2024

PLACE YOUR AD HERE AT LOWEST PRICE

ಕೆಜಿಎಫ್:ರಸ್ತೆ ಅಗಲಿಕರಣ ಕಾಮಗಾರಿ ನಡೆಸಲು ಅಡ್ಡಿಯಾಗಿದ್ದ ಕಾಂಪೌಂಡ್ ಗೋಡೆಯನ್ನು ಜೆಸಿಬಿ ಮೂಲಕ ಕೆಡುವ ವೇಳೆ ಸ್ಥಳದಲ್ಲಿದ್ದ ಕಾರ್ಮಿಕನೊಬ್ಬನ ಮೇಲೆ ಕಾಂಪೌಂಡ್ ಗೋಡೆ ಬಿದ್ದ ಪರಿಣಾಮ ವ್ಯಕ್ತಿಯು ಮೃತಪಟ್ಟಿರುವ ದಾರುಣ ಘಟನೆ ಆಂಡರಸನ್‍ಪೇಟೆಯಲ್ಲಿ ನಡೆದಿದೆ.

ಮೃತ ಕಾರ್ಮಿಕನನ್ನು ಲಕ್ಕನಾಯಕನಹಳ್ಳಿ ಗ್ರಾಮದ ಅಮರೇಶ್(40) ಎಂದು ಗುರ್ತಿಸಲಾಗಿದ್ದು, ಪತ್ನಿ ಮತ್ತು 3 ಹೆಣ್ಣು ಮಕ್ಕಳನ್ನಗಲಿದ್ದಾರೆ. ಆಂಡರ್‍ಸನ್‍ಪೇಟೆಯ ಶ್ರೀರಾಮ ದೇವಾಲಯದ ಮುಂಭಾಗದ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ರಸ್ತೆಯ ಅಂಚಿಗೆ ಇದ್ದ ಕಾಂಪೌಂಡ್ ಗೋಡೆ ತೆರವು ವೇಳೆ ಅವಘಡ ಸಂಭವಿಸಿದೆ ಎನ್ನಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ನಗರಸಭೆ ಮಾಜಿ ಅಧ್ಯಕ್ಷ ವಳ್ಳಲ್ ಮುನಿಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಾಹಿದ್ ಸ್ಥಳಕ್ಕೆ ಭೇಟಿ ನೀಡಿ ಮೃತ ಅಮರೇಶ್ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಆಂಡರ್‍ಸನ್‍ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Related Post

ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ
ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್

Leave a Reply

Your email address will not be published. Required fields are marked *

You missed

error: Content is protected !!