PLACE YOUR AD HERE AT LOWEST PRICE
ಕೋಲಾರ ತಾಲೂಕಿನ ಕೊಂಡರಾಜನಹಳ್ಳಿ ಗ್ರಂಥಾಲಯದಲ್ಲಿ ಗ್ರಾಮ ಪಂಚಾಯತಿ ಮತ್ತು ಆರೋಗ್ಯ ಇಲಾಖೆ ವತಿಯಿಂದ ಆರೋಗ್ಯ ಅಮೃತ ಅಭಿಯಾನ ಎಂಬ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಈ ಉಚಿತ ಆರೋಗ್ಯ ತಪಾಸಣಾ ಶಿಬಿರದ ವೇದಿಕೆಯಲ್ಲಿ ಗಿಡ ಬೆಳಸಿ ಆರೋಗ್ಯ ಹೆಚ್ಚಿಸಿ ಎಂಬ ಸಂದೇಶ ನೀಡುವ ಗಿಡಕ್ಕೆ ನೀರು ಹಾಯಿಸುವ ಮುಖೇನ ಉದ್ಘಾಟನೆ ಮಾಡಿದ ಪಂಚಾಯತಿ ಅಭಿವೃದ್ಧಿ ಅಕಾರಿ ರಾಮಕೃಷ್ಣ ಅವರು ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಂಡು ಆರೋಗ್ಯದ ಕಡೆ ಗಮನಹರಿಸಲು
ಕೋರಿದರು.
ಗ್ರಂಥಾಲಯದ ಮೇಲ್ವಿಚಾರಕಿ ಮಂಜುಳ ಆರೊಗ್ಯವಂತ ವ್ಯಕ್ತಿ ಆರೋಗ್ಯವಂತ ಸಮಾಜವನ್ನು ಕಟ್ಟಬಹುದು ಆ ನಿಟ್ಟಿನಲ್ಲಿ ಈ ಕಾರ್ಯಕ್ರಮ ಸದುಪಯೋಗವಾಗಲಿ ಎಂದು ಆಶಿಸಿ ಆಶಯ ಗೀತೆ ಮತ್ತು ಕಾರ್ಯಕ್ರಮದ ನಿರೂಪಣೆ ನಡೆಸಿಕೊಟ್ಟರು.
ಈ ಕಾರ್ಯಕ್ರಮದಲ್ಲಿ ಒಟ್ಟು ಅರವತ್ತಕ್ಕೂ ಹೆಚ್ಚು ಜನ ಇದರ ಸದುಪಯೋಗ ಪಡೆದುಕೊಂಡರು.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಉನ್ನಿಸಾ ಮದುರಾ, ಆಶಾ, ವೀಣಾ, ಗ್ರಾಮ ಪಂಚಾಯತಿ ಉಪಾದ್ಯಕ್ಷ ನಾಗೇಶ್, ಕಾರ್ಯದರ್ಶಿ ಚಂದ್ರಮೊಹನ್, ಸದಸ್ಯರಾದ ಸುಬ್ಬರಾಮಪ್ಪ, ಗೊವಿಂದಪ್ಪ, ರಾಮಚಂದ್ರಪ್ಪ, ಮಾಲತಿ, ನಾಗೇಶ್, ಉಮಾ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ತಪಾಸಣೆಗೆ ಬಂದಿದ್ದ ಸಾರ್ವಜನಿಕರು ಭಾಗವಹಿಸಿದ್ದರು.