• Mon. Apr 29th, 2024

PLACE YOUR AD HERE AT LOWEST PRICE

ಬಂಗಾರಪೇಟೆ:ತಾಲ್ಲೂಕಿನ ಬೋಡಗುರ್ಕಿ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನು ತಂದೆಯೊಬ್ಬರು ಉಸಿರುಗಟ್ಟಿಸಿ ಕೊಲೆ ಮಾಡಿರುವ ಪ್ರಕರಣ ನಡೆದಿದೆ.

ಪರಿಶಿಷ್ಟ ಜಾತಿಗೆ ಸೇರಿದ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಉಸಿರುಗಟ್ಟಿಸಿ ಸಾಯಿಸಿದ್ದು, ಇದರಿಂದ ಮನನೊಂದ ಪ್ರೇಮಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೂ ಬೋಡಗರ‍್ಕಿ ಗ್ರಾಮದಲ್ಲಿ ನಡೆದಿದೆ.

ಗೊಲ್ಲ ಜಾತಿಗೆ ಸೇರಿದ ಕೃಷ್ಣಮೂರ್ತಿ ಅವರ ಮಗಳು ಕೀರ್ತಿ(20) ಹಾಗೂ ಪಕ್ಕದ ಮನೆಯ ಪರಿಶಿಷ್ಟ ಜಾತಿಗೆ ಸೇರಿದ ಗಂಗಾಧರ(23) ಪರಸ್ಪರ ಪ್ರೀತಿಸುತ್ತಿದ್ದರು.

ಸೋಮವಾರ ರಾತ್ರಿ ಪ್ರೇಯಸಿ ಮನೆ ಬಳಿ ತೆರಳಿದ್ದ ಗಂಗಾಧರ ಅವರು ವಿವಾಹ ಮಾಡಿಕೊಡುವಂತೆ ಪೋಷಕರಿಗೆ ಒತ್ತಾಯಿಸಿದ್ದರು. ಪ್ರೇಯಸಿ ಕೂಡ ಗಂಗಾಧರ ಅವರನ್ನೇ ವಿವಾಹ ಆಗುವುದಾಗಿ ಹಠ ಹಿಡಿದಿದ್ದರು.

ಕೀರ್ತಿ ಕೆಜಿಎಫ್ ಕಾಲೇಜೊಂದರಲ್ಲಿ ದ್ವಿತೀಯ ವರ್ಷ ಪದವಿ ಓದುತ್ತಿದ್ದಳು. ಗಂಗಾಧರ ಅವರು ದ್ವಿತೀಯ ಪಿಯುಸಿ ಫೇಲ್ ಆಗಿದ್ದು, ಗಾರೆ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಗಳನ್ನು ಕೊಲೆ ಮಾಡಿರುವ ಆರೋಪದ ಮೇಲೆ ತಂದೆ ಕೃಷ್ಣಮೂರ್ತಿ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಮಸಮುದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ನಮ್ಮಸುದ್ದಿ.ನೆಟ್) nammasuddi.net ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:

ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!