PLACE YOUR AD HERE AT LOWEST PRICE
ಕೋಲಾರ:ತುಮಕೂರಿನಲ್ಲಿ ಲ್ಯಾಂಡ್ ಆರ್ಮಿ ಯಲ್ಲಿ AE ಆಗಿ ಕಾರ್ಯನಿರ್ವಹಿಸುತ್ತಿರುವ ಕೋದಂಡರಾಮಯ್ಯರ ಕೋಲಾರದ ಕುವೆಂಪು ನಗರದ ಪೂಜ ನಿಲಯ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿ ದಾಖಲೆ ಪರಿಶೀಲಿಸಿದೆ.
ಲೋಕಾಯುಕ್ತ SP ಉಮೇಶ್ ನೇತೃತ್ವದಲ್ಲಿ 10 ಜನ ಅಧಿಕಾರಿಗಳ ತಂಡದಿಂದ ದಾಳಿಮಾಡಿ ಪರಿಶೀಲನೆ ಬೆಳಿಗ್ಗೆ 6 ಗಂಟೆಯಿಂದ ನಡೆಯುತ್ತಿದೆ. ಮನೆ, ಕಾಂಪ್ಲೆಕ್ಸ್, ಶ್ರೀನಿವಾಸಪುರ ತಾಲೂಕಿನ ಲಕ್ಷ್ಮಿಸಾಗರ ಮನೆ, ತುಮಕೂರಿನ ಕಚೇರಿ ಮೇಲೆ ದಾಳಿ ಮಾಡಿ ಪರಿಶೀಲಿಸಲಾಗುತ್ತಿದೆ.
ಬೆಳಿಗ್ಗೆಯಿಂದ ಸರ್ಚಿಂಗ್ ನಡೆಸ್ತಿರೋ ಲೋಕಾ ಅಧಿಕಾರಿಗಳು ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಪರಿಶೀಲನೆ ನಡೆಸಲಾಗುತ್ತಿದೆ.
ರಾಜ್ಯಾದ್ಯಂತ ದಾಳಿ.
ಅಕ್ರಮ ಆಸ್ತಿ ಗಳಿಸಿದ್ದಾರೆಂಬ ಆರೋಪದ ಮೇಲೆ ರಾಜ್ಯದ ನಾನಾ ಭಾಗಗಳಲ್ಲಿ ಹಲವಾರು ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು, ತುಮಕೂರು, ಕಲಬುರಗಿ ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಕೆ.ಆರ್ ಪುರಂ ತಹಶೀಲ್ದಾರ್ ಅಜಿತ್ ಕುಮಾರ್ ರೈ ಮನೆ ಮತ್ತು ಸಂಬಂಧಿಕರ ನಿವಾಸಗಳ ಮೇಲೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಇಬ್ಬರು ಕೃಷಿ ಇಲಾಖೆ ಅಧಿಕಾರಿಗಳ ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ನಗರದ ವಿದ್ಯಾಗಿರಿಯಲ್ಲಿರುವ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ, ಬೀಳಗಿ ಸಹಾಯಕ ನಿರ್ದೇಶಕ ಕೃಷ್ಣ ಶಿರೂರ ಮನೆಗಳಲ್ಲಿ ಶೋಧಕಾರ್ಯ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿರುವ ಅಬಕಾರಿ ಇಲಾಖೆ ನಿರೀಕ್ಷಕ ವಿ.ರಮೇಶ್ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರಿನಲ್ಲಿಯೂ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಗಂಗಾಧರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಯಾದಗಿರಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಇಇ ವಿಶ್ವನಾಥ ರೆಡ್ಡಿ, ರಾಯಚೂರಿನ ನಗರ ಯೋಜನಾ ಶಾಖೆಯ ಸಹಾಯಕ ನಿರ್ದೇಶಕ ಶರಣಪ್ಪ ಮಡಿವಾಳ ಹಾಗೂ ಬೆಳಗಾವಿಯ ಹೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಶೇಖರ ಬಹುರೂಪಿ ಅವರ ನಿವಾಸಗಳ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.
ತುಮಕೂರಿನಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆ.ಎಚ್. ರವಿ, ಮಡಿಕೇರಿಯಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಫ್ಡಿಎ ಮಹಮ್ಮದ್ ಬಷೀರ್ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯ ಪ್ರಭಾರ ಎಇಇ ಭೀಮನಗೌಡ ಬಿರಾದಾರ, ಮುದ್ದೇಬಿಹಾಳ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಸಹಾಯಕ ಎಂಜಿನಿಯರ್ ಜೆ.ಪಿ.ಶೆಟ್ಟಿ ಅವರ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆಸಿದೆ.
(ನಮ್ಮಸುದ್ದಿ.ನೆಟ್) nammasuddi.net
ಜಾಹಿರಾತಿಗಾಗಿ ಸಂಪರ್ಕಿಸಿ:
ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.