• Sun. Apr 28th, 2024

ಕೋಲಾರ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ೨೦೨೩-೨೪ರ ವಾರ್ಷಿಕ ಪ್ರಶಸ್ತಿಗಳಿಗೆ ಪತ್ರಕರ್ತರ ಆಯ್ಕೆ

PLACE YOUR AD HERE AT LOWEST PRICE

ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ೨೦೨೩-೨೪ರ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಜುಲೈ ೧ ರಂದು ನಗರದ ಪತ್ರಕರ್ತರ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಅಧ್ಯಕ್ಷತೆಯಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಕೆ.ಎಸ್.ಗಣೇಶ್ ಮತ್ತು ವಿ.ಮುನಿರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್, ಖಜಾಂಚಿ ಎ.ಜಿ.ಸುರೇಶ್‌ಕುಮಾರ್ ಅವರನ್ನೊಳಗೊಂಡ ಸಮಿತಿಯು ಜಿಲ್ಲೆಯ ೯ ಮಂದಿ ಪತ್ರಕರ್ತರನ್ನು ವಿವಿಧ ಪ್ರಶಸ್ತಿಗಳಿಗೆ ಆಯ್ಕೆ ಮಾಡಿತು.

ಪ್ರಶಸ್ತಿ ವಿಜೇತ
ಪತ್ರಕರ್ತರ ವಿವರ

ಕೆ.ಆರ್.ಕೃಷ್ಣಸ್ವಾಮಿ ಅವರ ನೆನಪಿನಲ್ಲಿ: ಕೋಲಾರದ ವಿಜಯವಾಣಿ ದಿನಪತ್ರಿಕೆಯ ಜಿಲ್ಲಾ ವರದಿಗಾರ ಕೆ.ಎಂ.ನಾರಾಯಣಸ್ವಾಮಿ, ಜಿ.ನಾರಾಯಣಸ್ವಾಮಿ ಅವರ ನೆನಪಿನಲ್ಲಿ: ಕೋಲಾರದ ಪ್ರಜಾವಾಣಿ ದಿನಪತ್ರಿಕೆಯ ಛಾಯಾಗ್ರಾಹಕ ಎ.ಸರ್ವಜ್ಞಮೂರ್ತಿ, ಬಿ.ವಿ.ನರಸಿಂಹಮೂರ್ತಿ ಅವರ ನೆನಪಿನಲ್ಲಿ: ಉದಯವಾಣಿ ದಿನಪತ್ರಿಕೆಯ ಮಾಸ್ತಿ ಹೋಬಳಿ ವರದಿಗಾರ ಎಂ.ಮೂರ್ತಿ, ಎಂ.ಮಲ್ಲೇಶ್ ನೆನಪಿನಲ್ಲಿ: ಕೋಲಾರದ ನ್ಯೂಸ್ ಫಸ್ಟ್ ಜಿಲ್ಲಾ ವರದಿಗಾರ ಸಮೀರ್ ಅಹಮದ್ ಎನ್.ಎಂ, ಬಿ.ಎನ್.ಗುರುಪ್ರಸಾದ್ ನೆನಪಿನಲ್ಲಿ: ಮುಳಬಾಗಿಲಿನ ಉದಯಕಾಲ ದಿನಪತ್ರಿಕೆಯ ತಾಲೂಕು ವರದಿಗಾರ ವಿ.ಸುಕುಮಾರ್, ಹೆಚ್.ಎನ್.ಸೋಮಶೇಖರಗೌಡ ನೆನಪಿನಲ್ಲಿ: ಬಂಗಾರಪೇಟೆಯ ವಾಸ್ತವ ಕರ್ನಾಟಕ ದಿನಪತ್ರಿಕೆಯ ಸಂಪಾದಕ ಹೆಚ್.ಎಲ್.ಸುರೇಶ್, ಬಿ.ಆರ್ಮುಗಂ ನೆನಪಿನಲ್ಲಿ: ಕೆ.ಜಿ.ಎಫ್‌ನ ಸಾಕ್ಷಿ ದಿನಪತ್ರಿಕೆಯ ತಾಲೂಕು ವರದಿಗಾರ ಜೆ.ಸತ್ಯನಾರಾಯಣ, ಸಿ.ಎಂ.ರಂಗಾರೆಡ್ಡಿ ನೆನಪಿನಲ್ಲಿ: ಶ್ರೀನಿವಾಸಪುರದ ಚುಂಬಕವಾಣಿ ದಿನಪತ್ರಿಕೆಯ ತಾಲೂಕು ವರದಿಗಾರ ಬಿ.ಕೆ.ಉಪೇಂದ್ರ, ವಿ.ಎಂ.ನಾಗಪ್ಪ ಅವರ ನೆನಪಿನಲ್ಲಿ: ಕೋಲಾರದ ಕೋಲಾರ ನ್ಯೂಸ್ ಸಂಪಾದಕ ಕೆ.ಎನ್.ಚಂದ್ರಶೇಖರ್ ಅವರನ್ನು ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ.

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!