• Mon. May 20th, 2024

PLACE YOUR AD HERE AT LOWEST PRICE

ಕೆಜಿಎಫ್:ಬೆಸ್ಕಾಂ ಪೊಲೀಸ್ ಅಧೀಕ್ಷಕರಾಗಿದ್ದ ಕೆ.ಎಂ.ಶಾಂತರಾಜು ಭಾನುವಾರ ಕೆಜಿಎಫ್ ಪೊಲೀಸ್ ಜಿಲ್ಲೆಯ ನೂತನ ವರಿಷ್ಠಾಧಿಕಾರಿಗಳಾಗಿ ನಿಕಟಪೂರ್ವ ವರಿಷ್ಠಾಧಿಕಾರಿಗಳಾದ ಡಾ.ಧರಣಿದೇವಿ ರವರಿಂದ ಅಧಿಕಾರ ವಹಿಸಿಕೊಂಡರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಆದ್ಯತೆ ನೀಡಲಾಗುವುದು, ಹಿಂದಿನವರು ಮಾಡಿದ ಉತ್ತಮ ಕಾರ್ಯಗಳನ್ನು ಮುಂದುವರಿಸಲಾಗುವುದು, ಸಾಮಾನ್ಯ ನಾಗರಿಕರಿಗೆ ಅನ್ಯಾಯವಾಗದ ರೀತಿಯಲ್ಲಿ, ನಿಷ್ಪಕ್ಷಪಾತವಾಗಿ ಮತ್ತು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕೆಂದರು.

ಜನಸಾಮಾನ್ಯರು ತಮ್ಮ ಸಮಸ್ಯೆಗಳ ಪರಿಹಾರಕ್ಕೆ ಯಾವುದೇ ಸಮಯದಲ್ಲಿ ಭೇಟಿಯಾಗಬಹುದು ಎಂದರು. ಸಶಸ್ತ್ರ ಪೊಲೀಸ್ ಇನ್ಸ್ಪೆಕ್ಟರ್ ವಿ.ಸೋಮಶೇಖರ ಮತ್ತು ಸಿಬ್ಬಂದಿ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಗೌರವ ವಂದನೆ ನೀಡಿ, ಚಿನ್ನದ ನಗರಕ್ಕೆ ಆತ್ಮೀಯವಾಗಿ ಸ್ವಾಗತಿಸಿದರು.

ಸಹಾಯಕ ಆಡಳಿತಾಧಿಕಾರಿ ಜಿ.ವಿಶ್ವನಾಥ, ಕಛೇರಿ ಅಧೀಕ್ಷಕಿ ನಜೀಮಾಬಾನು, ಆಪ್ತ ಸಹಾಯಕಿ ಜಿ.ಮಮತಾ ಮತ್ತು ಕೆಜಿಎಫ್ ಪೊಲೀಸ್ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.

(ನಮ್ಮಸುದ್ದಿ.ನೆಟ್) nammasuddi.net

ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:

ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.

Related Post

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ
ಯರಗೋಳ್ ಗ್ರಾಮದಲ್ಲಿ “ದಿ 1979 ಅನ್ ಟೋಲ್ಡ್ ಸ್ಟೋರಿ” ಸಿನಿಮಾದ ಅಂತಿಮ ಚಿತ್ರೀಕರಣ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ

Leave a Reply

Your email address will not be published. Required fields are marked *

You missed

error: Content is protected !!