• Tue. May 7th, 2024

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸುಜ್ಞಾನ ನಿಧಿ ವಿತರಣೆ.

PLACE YOUR AD HERE AT LOWEST PRICE

ಕೆಜಿಎಫ್:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ತಾಲ್ಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯ ವೇತನವನ್ನು ಬೇತಮಂಗಲ ಪೊಲೀಸ್ ಠಾಣೆಯ ಪಿಎಸೈ ಸತೀಶ್ ವಿತರಣೆ ಮಾಡಿದರು.

ಬೇತಮಂಗಲ ಗ್ರಾಮದ ಬಸ್ ನಿಲ್ಧಾಣದ ಕೆಜಿಎಫ್ ತಾಲ್ಲೂಕು ಕಛೇರಿಯಲ್ಲಿ ತಾಲ್ಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಬಂದಿದ ಸುಜ್ಞಾನ ನಿಧಿ ಶಿಷ್ಯ ವೇತನವನ್ನು ವಿತರಿಸಲಾಯಿತು.

ಈ ವೇಳೆ ಶ್ರೀ ಕ್ಷೇತ್ರದ ಜಿಲ್ಲಾ ನಿರ್ದೇಶಕ ಮಾತನಾಡಿ, ರಾಜ್ಯಾಧ್ಯತ ವೃತ್ತಿಪರ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂಜ್ಯ ವಿರೇಂದ್ರ ಹೆಗ್ಗಡೆ ಅವರು ಸುಮಾರು ೫೨ ಸಾವಿರ ವಿದ್ಯಾರ್ಥಿಗಳಿಗೆ ೬೭ ಕೋಟಿಗೂ ಹೆಚ್ಚು ಮೊತ್ತವನ್ನು ಶಿಕ್ಷಣಕ್ಕಾಗಿ ಬಳಸುತ್ತಿದ್ದಾರೆಂದರು.

ಕೆಜಿಎಫ್ ತಾಲ್ಲೂಕಿನಲ್ಲಿ ಈ ಸಾಲಿಗೆ ೨೨ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿಯನ್ನು ಮಂಜೂರು ಮಾಡಲಾಗಿದೆ, ಶ್ರೀ ಕ್ಷೇತ್ರದಿಂದ ಇಂತಹ ಜನಪರ ಕಾರ್ಯಕ್ರಮಗಳನ್ನು ಮತ್ತಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಹಮ್ಮಿಕೊಳ್ಳುವುದಾಗಿ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ರವಿರೆಡ್ಡಿ, ತಾಲ್ಲೂಕು ಯೋಜನಾಧಿಕಾರಿ ಮಹದೇವ್ ನಾಯಕ್, ಕೃಷಿ ಮೇಲ್ವಿಚಾರಕ ಮನೋಹರ್, ತಾಲ್ಲೂಕಿನ ಎಲ್ಲಾ ವಲಯ ಮೇಲ್ವಿಚಾರಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.

 (ನಮ್ಮಸುದ್ದಿ.ನೆಟ್) nammasuddi.net

ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:

ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.

Related Post

ಸರ್ಕಾರದಿಂದ ಪರೀಕ್ಷೆ ವೇಳೆಯಲ್ಲಿ ಹಿಂದೂ ಮಹಿಳೆಯರ ಮಾಂಗಲ್ಯ-ಕಾಲುಂಗುರ ತೆಗೆಸುವ ದುಸ್ಸಾಹಸ: ಡಾ.ವೇಣುಗೋಪಾಲ್ ಆಕ್ರೋಶ
ಮೀಸಲಾತಿ ದುರುಪಯೋಗ ಸಾಭೀತಾದ ಹಿನ್ನಲೆ ಕೊತ್ತೂರು ಮಂಜುನಾಥ್ ಶಾಸಕ ಸ್ಥಾನ ರದ್ದು ಮಾಡುವಂತೆ ಕರ್ನಾಟಕ ದಲಿತ ಸಂಘಟನೆಗಳ ಮಹಾ ಒಕ್ಕೂಟ ಆಗ್ರಹ
ಐತಿಹಾಸಿಕ ೨೦೦ ನೇ ಹುಣ್ಣಿಮೆ ಹಾಡು ಕಾರ್ಯಕ್ರಮ ಪಂಚರಾಜ್ಯಗಳ ಸಾಂಸ್ಕೃತಿಕ ಸಂಗಮಕ್ಕೆ  ಆದಿಮ ಸಜ್ಜು.

Leave a Reply

Your email address will not be published. Required fields are marked *

You missed

error: Content is protected !!