PLACE YOUR AD HERE AT LOWEST PRICE
ಮುಳಬಾಗಿಲು:ಜೈನ ಸಮುಧಾಯ ಸಂತರಾದ ಕಾಮಕುಮಾರ ಶ್ರೀಗಳನ್ನು ಕೊಲೆ ಮಾಡಿರುವ ಆರೋಪಿಗಳನ್ನು ಸರ್ಕಾರ ಕೂಡಲೇ ಬಂದಿಸಿ ಪ್ರಕರಣವನ್ನು ಸಿಓಡಿಗೆ ವಹಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲು ಒತ್ತಾಯಿಸಿ ಜೈನ ಸಮುಧಾಯ ಜನರು ಶುಕ್ರವಾರ ನಗರದ ತಾಲೂಕು ಅಡಳಿತ ಭವನ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ರಾಜಪಾಲರಿಗೆ ಮನವಿ ಸಲ್ಲಿಸಿದರು.
ಜೈನ ಸಮುಧಾಯ ಜನರು ಈ ಸಂದರ್ಭದಲ್ಲಿ ಮಾತನಾಡಿ, ಇಡೀ ನಮ್ಮ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕ ರಾಜ್ಯದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಮ್ಮ ಜನಾಂಗದ ಸಂತರಾದ ಕಾಮಕುಮಾರ ಶ್ರೀಗಳನ್ನು ದುಷ್ಕರ್ಮಿಗಳು ಇತ್ತೀಚೆಗೆ ಬರ್ಬರವಾಗಿ ಕೊಲೆ ಮಾಡಿರುವ ವಿಷಯ ಎಲ್ಲರಿಗೂ ತಿಳಿದ ವಿಷಯವಾಗಿರುತ್ತದೆ. ಆದರೆ ಒಬ್ಬ ಸಾದು ಸಂತರನ್ನು ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ಹತ್ಯೆ ಮಾಡಿರುವುದು ಕರ್ನಾಟಕ ರಾಜ್ಯ ತಲೆ ತಗ್ಗಿಸುವಂತಹ ಪ್ರಕರಣವಾಗಿರುತ್ತದೆ ಎಂದು ಆರೋಪಿಸಿದರು.
ಆದ್ದರಿಂದ ಕೂಡಲೇ ನಮ್ಮ ಸಮುಧಾಯದ ಸಂತರನ್ನು ಕೊಲೆ ಮಾಡಿರುವ ಆರೋಪಿಗಳನ್ನುಸರ್ಕಾರ ಬಂದಿಸಿರುವುದು ಒಳ್ಳೆಯ ಬೆಳವಣಿಗೆಯಾಗಿದ್ದರೂ ಈ ಘಟನೆ ಕುರಿತು ತನಿಖೆ ಮಾಡಲು ಪ್ರಕರಣವನ್ನು ಸಿ.ಓಡಿಗೆ ವಹಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆಯನ್ನು ವಿದಿಸಬೇಕು. ಅಲ್ಲದೇ ರಾಜ್ಯದಲ್ಲಿ ಸಾಧು ಸಂತರಿಗೆ ಸೂಕ್ತ ರಕ್ಷಣೆ ಒದಗಿಸಬೇಕಂದು ಒತ್ತಾಯಿಸಿದರು.
(ನಮ್ಮಸುದ್ದಿ.ನೆಟ್) nammasuddi.net
ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:
ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.