PLACE YOUR AD HERE AT LOWEST PRICE
ಕೆಜಿಎಫ್:ರಾಜ್ಯ ರಸ್ತೆ ಸಾರಿಗೆ ಇಲಾಖೆಯ ಕಾರೊಂದು ೭೦ ವರ್ಷದ ವೃದ್ದೆಗೆ ಡಿಕ್ಕಿ ಹೊಡೆದ ಪರಿಣಾಮ ವೃದ್ದೆ ತೀವ್ರವಾಗಿ ಗಾಯಗೊಂಡು ಕೆಜಿಎಫ್ ನಗರದ ಸಾರ್ವಜನಿಕ ಆಸ್ಪತ್ರೆ ಸೇರಿದ್ದಾರೆ.
ತಾಲ್ಲೂಕಿನ ನಾಗಶೆಟ್ಟಿಹಳ್ಳಿ ನಿವಾಸಿ ವೆಂಕಟಮ್ಮ(೭೦) ಗಾಯಗೊಂಡ ವೃದ್ಧೆಯಾಗಿದ್ದು, ಶುಕ್ರವಾರ ಮದ್ನಾಹ ಸುಮಾರು ೧೨ ಗಂಟೆ ಸಮಯದಲ್ಲಿ ಬೇತಮಂಗಲ-ಬಂಗಾರಪೇಟೆ ಮುಖ್ಯರಸ್ತೆಯ ನಾಗಶೆಟ್ಟಿಹಳ್ಳಿ ಬಳಿ ಅಪಘಾತ ಸಂಭವಿಸಿದೆ.
ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಬೆಂಗಳೂರಿನ ಶಾಂತಿ ನಗರದ ರಾಜ್ಯ ರಸ್ತೆ ಸಾರಿಗೆ ಇಲಾಖೆ ಕಾರ್ಯದರ್ಶಿಗಳದ್ದು ಎಂದು ಹೇಳಲಾದ ಕೆಎ-೫೭ಎಫ್೫೨೬೧ ಸಂಖ್ಯೆಯ ಕಾರು ಬೇತಮಂಗಲದ ಕಡೆಯಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ವೃದ್ದೆ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ ಎಂದು ಹೇಳಲಾಗಿದೆ.
ಗಾಯಗೊಂಡ ವೃದ್ದೆಯನ್ನು ಅದೇ ಕಾರಿನಲ್ಲಿ ತಂದು ಸಾರ್ವಜನಿಕ ಆಸ್ಪತ್ರೆಯ ಬಳಿ ಬಿಟ್ಟು ಕಾರಿನಲ್ಲಿದ್ದವರು ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾರೆ. ಬಳಿಕ ಸಾರ್ವಜನಿಕರು ಗಾಯಗೊಂಡಿದ್ದ ವೃದ್ದೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ ಎಂದು ತಿಳಿದುಬಂದಿದೆ.
(ನಮ್ಮಸುದ್ದಿ.ನೆಟ್) nammasuddi.net
ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:
ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.