PLACE YOUR AD HERE AT LOWEST PRICE
ಕೆಜಿಎಫ್:ತಮ್ಮ ಕೆಲಸ ಕಾರ್ಯಗಳಿಗೆ ಕಚೇರಿಗೆ ಆಗಮಿಸಿಸುವ ಸಾರ್ವಜನಿಕರೊಂದಿಗೆ ಸೌಹಾರ್ದತೆಯೊಂದಿಗೆ ಮಾತುಕತೆ ನಡೆಸಿ ಸಮಯಕ್ಕೆ ಸರಿಯಾಗಿ ಕೆಲಸ ಮಾಡಿಕೊಡುವ ಮೂಲಕ ಕಚೇರಿಯನ್ನು ಜನಸ್ನೇಹಿ ಕಚೇರಿಯನ್ನಾಗಿ ಮಾಡುವಂತೆ ಶಾಸಕಿ ರೂಪಕಲಾ ಶಶಿಧರ್ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ನಗರಸಭಾ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, ನಗರಸಭೆಯಲ್ಲಿ ಹಲವು ಸುಧಾರಣೆಗಳನ್ನು ತರಬೇಕಾದ ಅಗತ್ಯವಿದ್ದು ಸಾರ್ವಜನಿಕರನ್ನು ವಿನಾಕಾರಣ ಕಚೇರಿ ಸುತ್ತ ಅಲೆದಾಡುವುದನ್ನು ತಪ್ಪಿಸಬೇಕೆಂದರು.
ಮಳೆಗಾಲ ಪ್ರಾರಂಭವಾಗುತ್ತಿದ್ದು, ಮಳೆ ಬರುವ ಮುನ್ನ ನಗರದಲ್ಲಿನ ತಗ್ಗು ಪ್ರದೇಶಗಳನ್ನು ಗುರುತಿಸುವುದು ಮತ್ತು ಕಾಲುವೆಗಳನ್ನು ಸ್ವಚ್ಚ ಮಾಡಿ ಮಳೆ ನೀರು ಸರಗವಾಗಿ ಹರಿದು ಹೋಗುವಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳವುದು. ನಗರದಾದ್ಯಂತ ನಡೆಯುತ್ತಿರುವ ರಸ್ತೆ ಮತ್ತಿತರ ಕಾಮಗಾರಿಗಳ ಗುಣಮಟ್ಟವನ್ನು ಪರಿಶೀಲಿಸುವುದೂ ಸೇರಿದಂತೆ ಶಿಸ್ತಿನಿಂದ ಕೆಲಸ ನಿರ್ವಹಿಸುವಂತೆ ಸೂಚಿಸಿದರು.
ನಗರದ ಅಭಿವೃದ್ಧಿಗೆ ಅಗತ್ಯವಾಗಿ ಬೇಕಿರುವ ಸಂಪನ್ಮೂಲಗಳನ್ನು ಕ್ರೋಡೀಕರಣ ಮಾಡುವ ನಿಟ್ಟಿನಲ್ಲಿ ಯಾರು ಹೆಚ್ಚು ತೆರಿಗೆಯನ್ನು ಬಾಕಿ ಉಳಿಸಿಕೊಂಡಿದ್ದಾರೆ ಎಂಬುದರ ಪಟ್ಟಿಯನ್ನು ತಯಾರು ಮಾಡಿ ಅವರಿಂದ ತೆರಿಗೆಯನ್ನು ವಸೂಲಿ ಮಾಡಬೇಕು. ತೆರಿಗೆ ವಸೂಲಿಯಿಂದ ನಗರದಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಸಹಾಯವಾಗುತ್ತದೆ ಎಂದರು.
ಬೀದಿ ದೀಪಗಳ ಅವಳಡಿಕೆಯನ್ನು ಸರ್ಮಪಕವಾಗಿ ನಡೆಸಬೇಕು ಸಾರ್ವಜನಿಕರಿಂದ ಯಾವುದೆ ದೂರುಗಳು ಕೇಳಿ ಬರದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಹಲವು ವರ್ಷಗಳಿಂದ ನಗರಸಭೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ವರ್ಗಾವಣೆಗೊಳಿಸುವ ನಿಟ್ಟಿನಲ್ಲಿ ಮುಂದಾಗಬೇಕು ಎಂದ ಅವರು. ಒಟ್ಟಾರೆ ಕೆಜಿಎಫ್ ನಗರಸಭೆಯನ್ನು ಇಡೀ ರಾಜ್ಯದಲ್ಲಿಯೇ ಮಾದರಿ ನಗರಸಭೆಯನ್ನಾಗಿ ಬದಲಾವಣೆ ಮಾಡಲು ಅಧಿಕಾರಿಗಳು ಕೆಲಸ ಮಾಡಬೇಕು ಎಂದರು.
ನಗರಸಭೆ ಪೌರಾಯುಕ್ತ ಪವನ್ಕುಮಾರ್, ಶಶಿಕುಮಾರ್, ಜಯರಾಮ್, ಕೃಷ್ಣಮೂರ್ತಿ, ಆರೋಗ್ಯ ನಿರೀಕ್ಷಕರಾದ ಸರಸ್ವತಿ ಹಾಜರಿದ್ದರು.
(ನಮ್ಮಸುದ್ದಿ.ನೆಟ್) nammasuddi.net
ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:
ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.