PLACE YOUR AD HERE AT LOWEST PRICE
ಬಂಗಾರಪೇಟೆ:ಕೋಲಾರ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ 2ಕೋಟಿ ವೆಚ್ಚದಲ್ಲಿ ಅಲ್ಪಸಂಖ್ಯಾತರ ವಸತಿ ನಿಲಯ ನಿರ್ಮಾಣ ಮಾಡಿರುವುದು ಬಂಗಾರಪೇಟೆಯಲ್ಲಿ ಮಾತ್ರ,ಈಗ ಅಲ್ಲಿ ನೂರಾರು ಮಕ್ಕಳು ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ ಎಂದು ಶಾಸಕ ಎಸ್ಎನ್ ನಾರಾಯಣಸ್ವಾಮಿ ಹೇಳಿದರು.
ಪಟ್ಟಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸುಮಾರು 75 ಲಕ್ಷ ವೆಚ್ಚದಲ್ಲಿ ಭೂ ಸೇನ ನಿಗಮದ ವತಿಯಿಂದ ನಿರ್ಮಿಸಿರುವ ಸರ್ಕಾರಿ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಾ, ಸಮ್ಮಿಶ್ರ ಸರ್ಕಾರ ಇದ್ದಾಗ ಈ ಕಟ್ಟಡ ನಿರ್ಮಾಣಕ್ಕೆ 75 ಲಕ್ಷ ಅನುದಾನ ಮಂಜೂರು ಮಾಡಿಸಲಾಗಿತ್ತು.
ಈಗ ಹೆಚ್ಚುವರಿಯಾಗಿ ಕೊಠಡಿ ಮತ್ತು ಶೌಚಾಲಯ ನಿರ್ಮಾಣಕ್ಕೆ ಇನ್ನೂ 50 ಲಕ್ಷ ಬಿಡುಗಡೆ ಆಗಲಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರತಿಯೊಬ್ಬರಿಗೂ ವಿಶೇಷವಾದ ಸೌಲಭ್ಯಗಳನ್ನು ಕೊಡಲಾಗುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತರಿಗೆ ವಿಶೇಷವಾದ ಒತ್ತುಕೊಟ್ಟು ಸಿದ್ದರಾಮಯ್ಯನವರು ಬಜೆಟ್ ನಲ್ಲಿ ವಿಶೇಷವಾದ ಅವಕಾಶಗಳನ್ನು ಅಲ್ಪಸಂಖ್ಯಾತರಿಗೆ ಒದಗಿಸಿ ಕೊಟ್ಟಿದ್ದಾರೆ ಎಂದರು.
ಪಟ್ಟಣದಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯದಲ್ಲಿ ನೂರಾರು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ನಮ್ಮ ಸರ್ಕಾರ ಈ ವರ್ಷವೂ ಸಹ ಸುಮಾರು 25 ಶಾಲಾ ಕಟ್ಟಡಗಳನ್ನು ನಿರ್ಮಾಣ ಮಾಡುತ್ತಿದ್ದೇವೆ. ಈಗಾಗಲೇ ಕೆಲ ಶಾಲೆಗಳು ಪೂರ್ತಿಯಾಗಿವೆ. ಅನೇಕ ಕಡೆ ಹೈ ಸ್ಕೂಲ್ ಶಾಲಾ ಕಟ್ಟಡಗಳು ಹಾಗೂ ಕಾಲೇಜು ಕಟ್ಟಡಗಳು ಕಾಮಗಾರಿಯನ್ನು ಮಾಡುತ್ತಿದ್ದೇವೆ ಎಂದರು.
ಈ ಶಾಲೆಯಲ್ಲಿ ಶೌಚಾಲಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಯನ್ನು ಪುರಸಭೆ ವತಿಯಿಂದ ನಿರ್ಮಿಸಿ ಕೊಡುತ್ತೇವೆ. ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾಭ್ಯಾಸವನ್ನು ಮಾಡಿ ಉನ್ನತ ಮಟ್ಟಕ್ಕೆ ಹೋಗಬೇಕು. ಉರ್ದು ಶಾಲೆಯಲ್ಲಿ ಈಗ ಕನ್ನಡ ವಿಷಯವನ್ನು ಕಲಿಯಲು ಸರ್ಕಾರ ಅನುಕೂಲ ಮಾಡಿಕೊಟ್ಟಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯ, ಪುರಸಭೆ ಮುಖ್ಯ ಅಧಿಕಾರಿ ಮೀನಾಕ್ಷಿ, ಪುರಸಭೆ ಸದಸ್ಯರಾದ ಶಫಿ,ಆಜಾದ್, ಪ್ರಶಾಂತ್, ನಯಾಜ್, ಮುಖಂಡರಾದ ಸುಹೇಲ್,ಶಫಿಕ್, ಶೇಖರ್, ರೋಷನ್ ಇದ್ದರು.
(ನಮ್ಮಸುದ್ದಿ.ನೆಟ್) nammasuddi.net
ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:
ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.