ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಶ್ರೀನಿವಾಸಪುರ ತಾಲ್ಲೂಕಿನ ಚಲ್ದಿಗಾನಹಳ್ಳಿಯ ಕೃಷಿಹೊಂಡದಲ್ಲಿ ಅನುಮಾನಾಸ್ಪದವಾಗಿ ಯುವಕನ ಶವ ಪತ್ತೆಯಾಗಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಚಲ್ದಿಗಾನಹಳ್ಳಿಯಲ್ಲಿ ಘಟನೆ ನಡೆದಿದ್ದು ಮೃತ ಯುವಕ ಚಲ್ದಿಗಾನಹಳ್ಳಿ ಗ್ರಾಮದ ರಾಕೇಶ್ (17) ಎಂದು ತಿಳಿದುಬಂದಿದೆ.
ಮೃತ ಯುವಕ ಚಿಂತಾಮಣಿ ಕಾಲೇಜಿನಲ್ಲಿ ಡಿಪ್ಲೋಮೋ ಓದುತ್ತಿದ್ದ ಎನ್ನಲಾಗಿದ್ದು ಯುವಕನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಕ್ರಮ ಜರುಗಿಸುತ್ತಿದ್ದಾರೆ.