• Wed. May 1st, 2024

PLACE YOUR AD HERE AT LOWEST PRICE

ಮುಳಬಾಗಿಲು:ಸಮಾಜದಲ್ಲಿ ಪ್ರತಿಯೊಬ್ಬ ಪೋಷಕರೂ ಜವಾಬ್ದಾರಿಯಿಂದ ವರ್ತಿಸುತ್ತಾ ಬಾಲ ಕಾರ್ಮಿಕತೆಗೆ ಕಡಿವಾಣ ಹಾಕಬೇಕಾಗಿದೆ, ಯಾರಾದರೂ ಬಾಲ ಕಾರ್ಮಿಕತೆಗೆ ಕುಮ್ಮುಕ್ಕು ನೀಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ರಕ್ಷಣಾಧಿಕಾರಿ ಎಂ.ನಾರಾಯಣ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು, ಪ್ರಸ್ತುತ ಸಮಾಜದಲ್ಲಿ ಬಡತನ, ಆರ್ಥಿಕ ಮುಗ್ಗಟ್ಟು, ವಿದ್ಯಾಭ್ಯಾಸದ ಕೊರತೆಯಿಂದಲೇ ಬಾಲ ಕಾರ್ಮಿಕರ ಸಂಖ್ಯೆ ಹೆಚ್ಚಾಗುತ್ತಿದ್ದು ಕೇವಲ ಕಾರ್ಯಕ್ರಮಗಳ ಆಚರಣೆಯಿಂದ ಬಾಲಕಾರ್ಮಿಕತೆ ಹೋಗಲಾಡಿಸಲು ಸಾಧ್ಯವಿಲ್ಲ.

ಸರ್ಕಾರ ಮಕ್ಕಳ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದ್ದರೂ ಪೋಷಕರು ತಮ್ಮ ಮಕಳನ್ನು ಶೈಕ್ಷಣಿಕವಾಗಿ ದೂರವಿರಿಸಿ ದುರುಪಯೋಗ ಪಡಿಸಿಕೊಳ್ಳುತ್ತಿರುವುದರಿಂದ ಬಾಲಕಾರ್ಮಿಕರ ಸಂಖ್ಯೆ ಹೆಚ್ಚಾಗುತ್ತಿದೆ ಎಂದರು.

ಪೋಷಕರು ಕುಟುಂಬ ಪೋಷಣೆಗಾಗಿ ೧೪ ವರ್ಷ ಒಳಗಿನ ಮಕ್ಕಳನ್ನು ಶೈಕ್ಷಣಿಕವಾಗಿ ವಂಚಿತಗೊಳಿಸಿ ಹೋಟೆಲ್, ಬೆಂಕಿ ಪೆಟ್ಟಿಗೆ ಕಾರ್ಖಾನೆ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ದುಡಿಯಲು ಹಾಕುತ್ತಿರುವುದರಿಂದ ಬಾಲಕಾರ್ಮಿಕರ ಸಂಖ್ಯೆ ಹೆಚ್ಚಾಗುತ್ತಿದೆ.

ಪೋಷಕರು ತಮ್ಮ ಮಕ್ಕಳೊಂದಿಗೆ ಅಕ್ಕ-ಪಕ್ಕದ ಮಕ್ಕಳನ್ನು ದುಡಿಮೆಗೆ ಬಳಸಿಕೊಳ್ಳುವುದನ್ನು ತಪ್ಪಿಸಲು ಅಧಿಕಾರಿಗಳೊಂದಿಗೆ ಜನಸಾಮಾನ್ಯರೂ ಸಮಾಜದಲ್ಲಿ ಜವಾಬ್ದಾರಿಯಿಂದ ವರ್ತಿಸಬೇಕಾಗಿದೆ, ಸ್ವಾತಂತ್ರ್ಯ ಬಂದು ೭೬ ವರ್ಷಗಳಾದರೂ ಇಡೀ ವಿಶ್ವದಲ್ಲಿಯೇ ಶೇ.೪೦ರಷ್ಟು ಬಾಲಕಾರ್ಮಿಕರು ಹಲವಾರುಕ್ಷೇತ್ರಗಳಲ್ಲಿ ದುಡಿಯುತ್ತಿದ್ದಾರೆ.

ಇಂತಹ ಪಿಡುಗನ್ನು ಹೋಗಲಾಡಿಸಲು ಸಂವಿಧಾನದ ಮುಖಾಂತರ ಹಲವಾರು ಕಾನೂನುಗಳನ್ನು ರಚಿಸಲಾಗಿದ್ದರೂ ಕಾನೂನಿನ ತೀಕ್ಷ್ಣತೆ ಹಾಗೂ ಪರಿಣಾಮಗಳ ಕುರಿತು ವಿವಿಧ ಕಾರ್ಖಾನೆ ಮಾಲೀಕರು, ಹೋಟೆಲ್‌ಗಳು, ಬೇಕರಿಗಳು ಹಾಗೂ ಪೋಷಕರಿಗೆ ಅರಿವಿದ್ದರೂ ತಮ್ಮ ಹಿತಾಸಕ್ತಿಗಾಗಿ ಬಾಲಕಾರ್ಮಿಕರನ್ನು ದುಡಿಮೆಗೆ ಬಳಸಿಕೊಳ್ಳುತ್ತಿರುವುದು ಕಾನೂನು ಬಾಹಿರವಾಗಿದ್ದು ಇನ್ನು ಮುಂದೆ ಇದೇ ರೀತಿ ಮುಂದುವರೆದಲ್ಲಿ ಶಿಕ್ಷಾರ್ಹ ದಂಡನೆಗೆ ಗುರಿಯಾಗಬೇಕಾದೀತೆಂದು ಎಚ್ಚರಿಕೆ ನೀಡಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!