• Sun. Apr 28th, 2024

PLACE YOUR AD HERE AT LOWEST PRICE

ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ‌ ಚುನಾವಣೆ ಹಿನ್ನಲೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕೋಲಾರದಲ್ಲಿ ರೌಡಿಗಳ ಪರೇಡ್ ನಡೆಸಿದರು.
ಕೋಲಾರ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಎಸ್ಪಿ ನಾರಾಯಣ್ ಅವರ ನೇತೃತ್ವದಲ್ಲಿ ಜಿಲ್ಲೆಯ ರೌಡಿಗಳ ಪರೇಡ್ ಮಾಡಿದರು. 
 ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ವತ್ತುಗಳ ನಾಶ, ಮಟ್ಕಾ, ಗಾಂಜಾ, ಬೆಟ್ಟಿಂಗ್, ಮರಳು ಮಾಫಿಯಾ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ 669 ರೌಡಿ ಶೀಟರ್ ಗಳ ಪೈಕಿ 340 ರೌಡಿ ಶೀಟರ್ ಗಳು ಹಾಜರಿದ್ರು. ಅಲ್ಲದೆ ಈಗಾಗಳೆ ರೌಡಿ ಶೀಟರ್ ಗಳಾಗಿರುವವರು ಮುಂದೆ ಯಾವುದೇ ಪ್ರಕರಗಳಲ್ಲಿ ಕಂಡು ಬಂದರೆ ಗಡಿಪಾರು ಮಾಡುವುದಾಗಿ ಖಡಕ್ ಎಚ್ಚರಿಕೆ ಕೊಟ್ಟರು.
 ಇನ್ನೂ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳ ಮೇಲೆ ಗೂಂಡಾ ಕಾಯ್ದೆ ಪ್ರಕಾರ ಕ್ರಮಕೈಗೊಂಡಿದ್ದು  19 ಜನರನ್ನ ಗಡಿಪಾರು ಮಾಡಿರುವುದಾಗಿ ತಿಳಿಸಿದರು.  ವಯಸ್ಸಿನ ಆಧಾರದ ಮೇಲೆ ಹಾಗೂ ಮುಂದೆ ಕಾನೂನು ಉಲ್ಲಂಘನೆ ಮಾಡದೆ ಯಾವುದೇ ಪ್ರಕರಗಳಲ್ಲಿ ತಮ್ಮ ಹಸ್ತಕ್ಷೇಪ ಇಲ್ಲದಂತಹವರನ್ನ ಗುರುತಿಸಿ ರೌಡಿ ಶೀಟರ್ ನಿಂದ ಮುಕ್ತಿಗೊಳಿಸಲಾಗುವುದು ಎಂದು ತಿಳಿಸಿದರು. 
 ಅಲ್ಲದೆ ಮುಂದೆ ಗ್ರಾಮಪಂಚಾಯ್ತಿ, ಜಿಲ್ಲಾ ಪಂಚಾಯ್ತಿ  ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಗಳು ಎದುರಾಗುತ್ತಿದ್ದು, ಚುನಾವಣೆ ಸಂದರ್ಭದಲ್ಲಿ ಕಾನೂನು ಉಲ್ಲಂಘನೆ ಮಾಡಿದರೆ ಕಠಿಣ ಕ್ರಮಕೈಗೊಳ್ಳುವ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಡಿವೈಎಸ್ಪಿ ಮುರಳೀಧರ್ ಉಪಸ್ಥಿತರಿದ್ದರು.
nammasuddi.net ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:

ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!