• Sun. May 5th, 2024

PLACE YOUR AD HERE AT LOWEST PRICE

ಕೆಜಿಎಫ್:ಖಾಸಗಿ ಶಾಲೆಗಳಲ್ಲಿ ಮೀತಿ ಮೀರಿದ ಡೋನೇಷನ್ ಹಾವಳಿಯಿಂದ ದಲಿತರ ಮಕ್ಕಳನ್ನು ಖಾಸಗಿ ಶಾಲೆಗಳಲ್ಲಿ ಸೇರಿಸಲು ಸಾಧ್ಯವಾಗುತ್ತಿಲ್ಲ ಎಂದು ಕರ್ನಾಟಕ ದಲಿತ ಸಮಾಜ ಸೇನೆ ಅಧ್ಯಕ್ಷ ಸೂಲಿಕುಂಟೆ ಆನಂದ್ ಹೇಳಿದರು.

ನಗರದ ಚಾಂಪಿಯನ್ ರೀಫ್ಸ್ ನ ಎಸ್.ಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ದಲಿತರ ಕುಂದು ಕೊರತೆಗಳ ಸಭೆಯಲ್ಲಿ ಅವರು ಮಾತನಾಡಿ, ಖಾಸಗಿ ಶಾಲೆಗಳ ಮುಖ್ಯಸ್ಥರು ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ಮಕ್ಕಳಿಂದ ಲಕ್ಷಾಂತರ ರೂಗಳನ್ನು ಶುಲ್ಕವನ್ನಾಗಿ ಪಡೆಯುತ್ತಿದ್ದಾರೆ. ಈ ಬಗ್ಗೆ ಬಿಇಓ ಕಚೇರಿ ಮುಂಭಾಗ ಪ್ರತಿಭಟನೆಗಳನ್ನು ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.

ಖಾಸಗಿ ಶಾಲೆಗಳಲ್ಲಿ ಶುಲ್ಕ ಮಾತ್ರ ಪಂಚಾತಾರ ಹೋಟಲೆಗಳಲ್ಲಿ ವಸೂಲಿ ಮಾಡುವಂತೆ ಮಾಡುತ್ತಾರೆ. ಶಿಕ್ಷಣದ ಗುಣಮಟ್ಟ ಮಾತ್ರ ಶೂನ್ಯ. ಕೂಡಲೇ ಡಿಡಿಪಿಐ ನೇತೃತ್ವದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರ ಸಭೆಯನ್ನು ಕರೆದು ಈ ಬಗ್ಗೆ ಕ್ರಮ ವಹಿಸಬೇಕು ಎಂದು  ಆಗ್ರಹಿಸಿದರು.

ಪ್ರತಿ ಮೂರು ತಿಂಗಳಿಗೊಮ್ಮೆ ದಲಿತರ ಕುಂದು ಕೊರತೆಗಳ ಸಭೆಯನ್ನು ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಅಧಿಕಾರಿಗಳ ಸಮ್ಮಖದಲ್ಲಿ ಸಭೆ ನಡೆಸಿದರೆ ಬಹುತೇಕ ದಲಿತರ ಸಮಸ್ಯೆಗಳು ಇತ್ಯರ್ಥವಾಗಲಿವೆ. ಕಂದಾಯ ಇಲಾಖೆಯಲ್ಲಿ ದಲಿತರಿಗೆ ಸಂಬಂದಪಟ್ಟ ತಿದ್ದುಪಡಿ, ಪೋಡಿ ಮಾಡಿಸುವುದು.

ವಂಶವೃಕ್ಷ, ನಮೂನೆ-೫೩, ನಮೂನೆ-೫೭ ರಲ್ಲಿ ಅರ್ಜಿ ಹಾಕಿಕೊಂಡಿರುವ ದಲಿತರು ಭೂಮಿಗೆ ಹಕ್ಕು ಪಡೆಯಲು ೪೦ ವರ್ಷಗಳಿಂದ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಎಲ್ಲ ಸಮಸ್ಯೆಗಳು ಬಗೆಹರಿಯಬೇಕಾದರೆ ಕುಂದು ಕೊರತೆಗಳ ಸಭೆಯಲ್ಲಿ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಇರಬೇಕೆಂದು ದಲಿತ ಮುಖಂಡರು ಒತ್ತಾಯಿಸಿದರು.

ಸಭೆಯಲ್ಲಿ ದಲಿತ ಮುಖಂಡರಾದ ಹುಣಸನಹಳ್ಳಿ ವೆಂಕಟೇಶ್, ಪಿಚ್ಚಹಳ್ಳಿ ಮಂಜುನಾಥ್, ಪಾರಂಡಹಳ್ಳಿ ಕೃಷ್ಣಮೂರ್ತಿ, ಜೀವಿಕ ರಾಮಚಂದ್ರಪ್ಪ, ಕಾಮಸಮುದ್ರಂ ಕೃಷ್ಣ ಹಾಗೂ ಕೆಜಿಎಫ್ ಮತ್ತು ಬಂಗಾರಪೇಟೆ ತಾಲೂಕಿನ ೭೦ ಕ್ಕೂ ಹೆಚ್ಚು ದಲಿತ ಮುಖಂಡರು ಭಾಗವಹಿಸಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!