• Thu. May 2nd, 2024

PLACE YOUR AD HERE AT LOWEST PRICE

ಕೋಲಾರ, ಜುಲೈ. ೨೬ : ಉಗ್ರಗಾಮಿ ಹಾಗೂ ದೇಶ ವಿರೋಧಿ ಚಟುವಟಿಕೆಗಳನ್ನು ಮಾಡಿದವರ, ಶಾಸಕ ತನ್ವೀರ್ ಸೇಠ್ ಪತ್ರ ಬರೆದಿರುವುದು ಗಮನಿಸಿದರೆ ಉಗ್ರಗಾಮಿ ಸಂಘಟನೆ ಮುಖ್ಯಸ್ಥರಂತೆ ಕಾಣುತ್ತಿದ್ದಾರೆಂದು ಕೋಲಾರ ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಕೋಲಾರದ ಡಾ.ಅಂಬೇಡ್ಕರ್ ಮಕ್ಕಳ ಉದ್ಯಾನವನದಲ್ಲಿ ಜಿಲ್ಲಾ ಮಾಜಿ ಯೋಧರ ಟ್ರಸ್ಟ್ ಆಯೋಜಿಸಿದ್ದ ಕಾರ್ಗಿಲ್ ವಿಜಯ ದಿವಸ್ ಹಾಗೂ ಯುದ್ಧ ಸ್ಮಾರಕ ಉದ್ಘಾಟನೆ ನೆರವೇರಿಸಿ ವರು ಮಾತನಾಡಿದರು. ದೇಶ ದ್ರೋಹಿಗಳ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಪತ್ರ ಬರೆದಿರುವ ಬಗ್ಗೆ ಪ್ರಸ್ತಾಪಿಸಿದ ಅವರು, ೮೦ ವರ್ಷಗಳಾದರೂ ಹಿರಿಯ ಸ್ವಾತಂತ್ರ‍್ಯ ಹೋರಾಟಗಾರರ ವಿರುದ್ಧ ಇದ್ದ ಕೇಸ್ ಇನ್ನೂ ವಾಪಸ್ ಆಗಿಲ್ಲ, ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ, ಗಲಭೆ ನಡೆಸಿದವರ ರಕ್ಷಣೆಗೆ ಮುಂದಾಗಿರುವುದು ನಾಚಿಕೆಗೇಡು.

ದೇಶ ವಿರೋಧಿ ಚಟುವಟಿಕೆ ನಡೆಸಿದವರ ಪರ ಪತ್ರ ಬರೆದಿರುವ ತನ್ವೀರ್ ಸೇಠ್ ನೀವು ಭಾರತ ದೇಶದಲ್ಲಿ ಜೀವನ ನಡೆಸ್ತಿದ್ದೀರಾ ಎಂದು ಪ್ರಶ್ನಿಸಿದರು. ಸ್ವತಃ ತನ್ವೀರ್ ಸೇಠ್ ಅವರ ಮೇಲಿನ ಕೇಸ್‌ಗಳನ್ನ ಸರ್ಕಾರ ವಾಪಾಸ್ ಪಡೆದಿಲ್ಲ, ಅಷ್ಟೇ ಅಲ್ಲದೆ ಅವರದ್ದೆ ಸಂಘಟನೆಯವರು ಅವರನ್ನೇ ಕೊಲ್ಲಲು ಪ್ರಯತ್ನಿಸಿದ್ದಾರೆ, ಹಾಗಾಗಿ ಈಗ ಅವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ತನ್ವೀರ್ ಸೇಠ್ ರವರು ಈ ಪ್ರಯತ್ನ ಮಾಡ್ತಾ ಇದ್ದಾರೆ ಎಂದು ಆರೋಪಿಸಿದರು.

ಯು.ಪಿ.ಎ. ಒಕ್ಕೂಟಕ್ಕೆ ಇಂಡಿಯಾ ಕೂಟ ಎಂಬ ಹೆಸರಿಟ್ಟಿರುವ ವಿಚಾರವನ್ನು ಪ್ರಸ್ತಾಪಿಸಿ, ಇವರು ಮಾಡಿಕೊಂಡಿರುವ ಈಸ್ಟ್ ಇಂಡಿಯಾ ಕಂಪನಿ ಅದೊಂದು “ಆಲಿ ಬಾಬಾ ಚಾಲೀಸ್ ಚೋರ್” ಎನ್ನುವ ಒಕ್ಕೂಟ ಎಂದು ವ್ಯಂಗ್ಯವಾಡಿದ ಅವರು, ಪಿ.ಎಫ್.ಐ. ಎಸ್.ಡಿ.ಪಿ.ಐ, ಇಂಡಿಯನ್ ಮುಜಾಹಿದ್ದೀನ್ ನಂತಹ ಉಗ್ರಗಾಮಿ ಸಂಘಟನೆ ಹೆಸರಿನಲ್ಲಿಯೂ ಇಂಡಿಯಾ ಎಂದು ಹಾಕಿಕೊಂಡಿದ್ದಾರೆ, ದೇಶ ವಿರೋಧಿ ಚಟುವಟಿಕೆ ನಡೆಸುವವರು ಇಂಡಿಯಾ ಪದ ಉಪಯೋಗಿಸಿದ್ದಾರೆ ಈ ಕೂಟದ ಸದಸ್ಯರು ದೇಶಕ್ಕೆ ಮಾರಕ ಇವರನ್ನು ಜನರು ನಂಬಲ್ಲ ಎಂದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!