• Sat. May 18th, 2024

PLACE YOUR AD HERE AT LOWEST PRICE

ಬಂಗಾರಪೇಟೆ:ಜಿಲ್ಲೆಯಲ್ಲಿ ಪಟ್ಟಣದ ಪುರಸಭೆ ಅಭಿವೃದ್ಧಿ ವಿಚಾರದಲ್ಲಿ ಹಾಗೂ ಸ್ವಚ್ಛತೆಯ  ವಿಚಾರದಲ್ಲಿ ಮೊದಲನೇ ಸ್ಥಾನ ಪಡೆದುಕೊಂಡಿದೆ ಎಂದು ಶಾಸಕ ಎಸ್ಎನ್ ನಾರಾಯಣಸ್ವಾಮಿ ಹೇಳಿದರು.

ಪಟ್ಟಣದ ಪುರಸಭೆ ಕಚೇರಿ ಆವರಣದಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಹಾಗೂ ವಿಶ್ವ ಪ್ರಕೃತಿ ಸಂರಕ್ಷಣಾ ದಿನದ ಅಂಗವಾಗಿ ನಡೆದ ಬೃಹತ್ ಪ್ಲಾಸ್ಟಿಕ್ ನಿರ್ಮೂಲನೆ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಮೇಲಿನಂತ ಮೆಚ್ಚುಗೆ ವ್ಯಕ್ತಪಡಿಸಿದರು.

ಮುಂದುವರೆದು ನಮಾತನಾಡಿದ ಅವರು ಕರ್ನಾಟಕ ಸರ್ಕಾರ ಪ್ಲಾಸ್ಟಿಕ್ ಅನ್ನು ಮುಕ್ತ ಮಾಡಬೇಕು ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಅನ್ನು ಬಳಸಬಾರದೆಂದು ಅಭಿಯಾನವನ್ನು 10 ದಿನಗಳಿಂದ ಹಮ್ಮಿಕೊಂಡಿತ್ತು.

ಈ ಅಭಿಯಾನವನ್ನು ಪುರಸಭೆಯ ಮುಖ್ಯ ಅಧಿಕಾರಿ ಮೀನಾಕ್ಷಿ ರವರು ಪ್ರಾರಂಭ ಮಾಡಿ ಇಂದು ಕೊನೆಯ ದಿನವಾಗಿದ್ದು, ಪುರಸಭೆಯ ಮುಂಭಾಗ ಉದ್ಯಾನವನವನ್ನು ಪ್ರಾರಂಭ ಮಾಡುವ ಮುಖಾಂತರ ಪುಸಭೆ ಕೂಡ ಸಮಾಜದ ಒಟ್ಟಿಗೆ ಇದ್ದೇವೆ ಎನ್ನುವ ಸಂದೇಶವನ್ನು ಸಾರುವಂಥ ಕೆಲಸವನ್ನು ಮಾಡಲಾಗುತ್ತಿದೆ ಹೇಳಿದರು.

ವಿಶೇಷವಾಗಿ ನಾವೆಲ್ಲರೂ ಸಹ ಪರಿಸರವನ್ನು ಪ್ರೀತಿ ಮಾಡಬೇಕು. ಪರಿಸರವನ್ನು ಪ್ರೀತಿಸಿ ಮರ ಗಿಡಗಳನ್ನು ಯಥೇಚ್ಛವಾಗಿ ಬೆಳೆಸಿದಾಗ ಉತ್ತಮ ಮಳೆಯಾಗುತ್ತದೆ. ಮಳೆ ಆದರೆ ಉತ್ತಮ ಬೆಳೆಯಾಗುತ್ತದೆ ಮತ್ತು ನೀರಿನ ಕೊರತೆ ನಿವಾರಣೆ ಆಗುತ್ತದೆ.

ಈ ನಿಟ್ಟಿನಲ್ಲಿ ಹೆಚ್ಚು ಹೆಚ್ಚು ಮರಗಳನ್ನು ಬೆಳೆಸಲಿಕ್ಕೆ ಅರಣ್ಯ ಇಲಾಖೆ ಹಾಗೂ ಪುರಸಭೆ ಸಹಕಾರವನ್ನು ಕೊಡುತ್ತಿದೆ. ಹಾಗಾಗಿ ನಗರದಾದ್ಯಂತ ಯಾರ್ಯಾರು ಮನೆಗಳ ಮುಂದೆ ಗಿಡಗಳನ್ನು ಬೆಳೆಸುವುದಕ್ಕೆ ಆಸಕ್ತಿ ಇದೆಯೋ ಅಂತಹವರ ಮನೆ ಮುಂದೆ ಅರಣ್ಯ ಇಲಾಖೆ ಹಾಗು ಪುರಸಭೆ ವತಿಯಿಂದ ಉಚಿತವಾಗಿ ಸಸಿಗಳನ್ನು ನೀಡಲಾಗುವುದೆಂದು ತಿಳಿಸಿದರು.

ಪ್ರತಿಯೊಬ್ಬರೂ ಮನೆಯಲ್ಲಿ ವ್ಯರ್ಥ ಮಾಡುವ ನೀರನ್ನು ಗಿಡಗಳಿಗೆ ಹಾಕಿ ಗಿಡಗಳನ್ನು ಬೆಳೆಸಿದರೆ ಒಳ್ಳೆಯ ವಾತಾವರಣ ಗಾಳಿ ಬೆಳಕು ಸಹ ಸಿಗುತ್ತದೆ. ಇದೇ ರೀತಿ ಪುರಸಭೆಯಲ್ಲಿ ಎಲ್ಲಾ ಹಂತಗಳನ್ನು ಸಹ ಉತ್ತಮವಾದ ಕೆಲಸಗಳನ್ನು ಮಾಡುತ್ತಿದ್ದೇವೆ.

ಹೊಸದಾಗಿ ಬಂದಿರುವಂತಹ ಸಿಓ ಪುರಸಭಾ ಕಚೇರಿಗೆ ಬರುವ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ. ಅದಕ್ಕಾಗಿ ಎಲ್ಲಾ ಪುರಸಭೆ ಸದಸ್ಯರು ಸಹ ಅವರಿಗೆ ಸಹಕಾರ ನೀಡಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಪ್ರಶಾಂತ್,ನಯಾಜ್, ಬಾಬುಲಾಲ್ ಪುರಸಭೆ ಮುಖ್ಯ ಅಧಿಕಾರಿ ಮೀನಾಕ್ಷಿ, ಆರೋಗ್ಯ ಅಧಿಕಾರಿ ಗೋವಿಂದರಾಜು,ಜೆ ಇ ರವಿ, ಕಾಂಗ್ರೆಸ್ ಮುಖಂಡ ರಫೀಕ್ ಹಾಗೂ ಪುರಸಭೆಯ ಸಿಬ್ಬಂದಿ ವರ್ಗದವರು ಇದ್ದರು.

Related Post

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ
ಯರಗೋಳ್ ಗ್ರಾಮದಲ್ಲಿ “ದಿ 1979 ಅನ್ ಟೋಲ್ಡ್ ಸ್ಟೋರಿ” ಸಿನಿಮಾದ ಅಂತಿಮ ಚಿತ್ರೀಕರಣ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ

Leave a Reply

Your email address will not be published. Required fields are marked *

You missed

error: Content is protected !!