PLACE YOUR AD HERE AT LOWEST PRICE
ಕೋಲಾರ, ಜುಲೈ ೨೮ : ಸಾರ್ವಜನಿಕರ ಕುಂದುಕೊರತೆಗಳನ್ನು ವಿಚಾರಿಸಲು ನೂತನವಾಗಿ ಶಾಸಕರ ಕಚೇರಿಯನ್ನು ತೆರೆದಿದ್ದು ಯಾವುದೇ ಸಮಸ್ಯೆಗಳನ್ನು ಕಚೇರಿಯಲ್ಲಿ ದೂರು ಸಲ್ಲಿಸಬಹುದು ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದ್ದಾರೆ.
ಕೋಲಾರದ ಹಳೆ ಡಿಸಿ ಕಚೇರಿ ಆವರಣದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಅವರ ನೂತನ ಕಚೇರಿಯನ್ನು ಎಂಎಲ್ಸಿ ಅನಿಲ್ ಕುಮಾರ್ ಉದ್ಘಾಟಿಸಿದರು. ಕಚೇರಿ ಉದ್ಘಾಟನೆ ನಂತರ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್ ವಾರದ ಎರಡು ದಿನ ಕಚೇರಿಯಲ್ಲಿ ಲಭ್ಯ ಇರುತ್ತೇನೆ ಸಾರ್ವಜನಿಕರು ನೇರವಾಗಿ ಬಂದು ತಮ್ಮ ಸಮಸ್ಯೆಗಳು ಹಾಗೂ ಕುಂದುಕೊರತೆಗಳನ್ನು ಹೇಳಿಕೊಳ್ಳಬಹುದು ಎಂದರು.
ಯಾವುದೇ ಮಧ್ಯವರ್ತಿಗಳು ಆಶ್ರಯಸದೇ ನೇರವಾಗಿ ಕಚೇರಿಗೆ ಬಂದು ತಮ್ಮ ಸಮಸ್ಯೆಗಳನ್ನು ಹೇಳಿದರೆ ಶ್ರೀಘವಾಗಿ ಸಮಸ್ಯೆಗಳನ್ನು ಬಗೆಹರಿಸುವು ಕೆಲಸ ಮಾಡುವುದಾಗಿ ಹೇಳಿದರು. ಇನ್ನೂ ಪ್ರತಿದಿನ ಶಾಸಕರ ಕಚೇರಿ ತೆರೆದಿರುತ್ತದೆ. ಕಚೇರಿಯಲ್ಲಿ ಮೂರು ನಾಲ್ಕು ಸಿಬ್ಬಂದಿ ಕೆಲಸ ಮಾಡುತ್ತಾರೆ, ಸಾರ್ವಜನಿಕರು ಯಾವುದೇ ಕುಂದುಕೊರತೆಗಳು ಇದ್ದರೆ ಕಚೇರಿ ಸಿಬ್ಬಂದಿಗೆ ದೂರು ಸಲ್ಲಿಸಬಹುದು, ಕಚೇರಿ ಸಿಬ್ಬಂದಿ ತಮ್ಮ ಗಮನಕ್ಕೆ ತಂದ ತಕ್ಷಣವೇ ಸಮಸ್ಯೆ ಬಗೆಹರಿಸುವ ಕೆಲಸ ಮಾಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷಿö್ಮನಾರಾಯಣ್(ಲಚ್ಚಿ), ಹಿರಿಯ ಹೋರಾಟಗಾರ ಸಿ.ಎಂ.ಮುನಿಯಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ವಕ್ಕಲೇರಿ ರಾಜಪ್ಪ, ಮೈಲಾಂಡಹಳ್ಳಿ ಮುರಳಿ, ನಂದಿನಿ ಪ್ರವೀಣ್, ವರದೇನಹಳ್ಳಿ ವೆಂಕಟೇಶ್, ಚಂಜಿಮಲೆ ರಮೇಶ್, ಖಾದ್ರಿಪುರ ಬಾಬು, ಮಾರ್ಜೇನಹಳ್ಳಿ ಬಾಬು, ನಿರಂಜನ್, ತ್ಯಾಗರಾಜ್, ಕೃಷ್ಣೇಗೌಡ ಮತ್ತಿತರರು ಭಾಗವಹಿಸಿದ್ದರು
nammasuddi.net ನಲ್ಲಿ ಜಾಹೀರಾತು ಪ್ರಕಟಣೆಗಾಗಿ ಸಂಪರ್ಕಿಸಿ :
ಕೆ.ಎಸ್.ಗಣೇಶ್ – 9448311003
ಸಿ.ವಿ.ನಾಗರಾಜ್ – 9632188872
ಕೆ.ರಾಮಮೂರ್ತಿ – 9449675480