• Fri. May 3rd, 2024

PLACE YOUR AD HERE AT LOWEST PRICE

ಹೊಸದಾಗಿ ಪಡಿತರ ಕಾರ್ಡ್ ವಿತರಣೆಗೆ ಸೂಚನೆ ನೀಡಲಾಗಿದೆ. ಹೊಸದಾಗಿ ಬಿಪಿಎಲ್‌ ಮತ್ತು ಎಪಿಎಲ್‌ ಕಾರ್ಡ್​ಗೆ ಅರ್ಜಿ ಸಲ್ಲಿಸಬಹುದು. ನೀತಿ ಸಂಹಿತೆ ಜಾರಿಯಾಗಿದ್ದ ಹಿನ್ನೆಲೆ ರೇಷನ್​​ ಕಾರ್ಡ್​ ವಿತರಣೆ ಸ್ಥಗಿತ ಮಾಡಲಾಗಿತ್ತು. ಈಗ ಹೊಸ ಪಡಿತರ ಕಾರ್ಡ್​ ವಿತರಣೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆಹಾರ ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದರು.

ವಿಧಾನಸೌಧದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಹೊಸ ಪಡಿತರ ಕಾರ್ಡ್​ ವಿತರಣೆಗೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಪಡಿತರ ಕಾರ್ಡ್​ಗೆ ಹೊಸ ಸದಸ್ಯರ ಹೆಸರು ಸೇರ್ಪಡೆಗೆ ಅವಕಾಶ ನೀಡಲಾಗಿದೆ. ಕಾರ್ಡ್​ನಲ್ಲಿರುವ ಮೃತರ ಹೆಸರನ್ನು ತೆರವುಗೊಳಿಸಲು ಸೂಚಿಸಲಾಗಿದೆ” ಎಂದು ಹೇಳಿದರು.

556 ಕೋಟಿ ರೂ. ಹಣ ಹಂಚಿಕೆ

“ಅನ್ನಭಾಗ್ಯದ ಉದ್ದೇಶ ಹಸಿದವರಿಗೆ ಅನ್ನ ಕೊಡಬೇಕು ಅಂತ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಡಿ 1.28 ಕೋಟಿ ಪಡಿತರ ಕುಟುಂಬಗಳಿಗೆ ನೇರವಾಗಿ ನಗದು ವರ್ಗಾವಣೆ ಆಗಲಿದೆ. ಈವರೆಗೆ ಒಂದು ಕೋಟಿಗೂ ಹೆಚ್ಚು ಕುಟುಂಬಗಳಿಗೆ ಸುಮಾರು 556 ಕೋಟಿ ರೂ. ಹಣ ಹಾಕಲಾಗಿದೆ. ಇದರಿಂದ 3.50 ಕೋಟಿ ಫಲಾನುಭವಿಗಳಿಗೆ ಅನುಕೂಲ ಆಗಿದೆ” ಎಂದರು.

ಬಜೆಟ್‌ನಲ್ಲಿ 10 ಸಾವಿರ ಕೋಟಿ ರೂ. ಹಣ ನಿಗದಿ

ಅನ್ನಭಾಗ್ಯ ಯೋಜನೆಗೆ ಅಕ್ಕಿ ಸಿಗದ ಹಿನ್ನೆಲೆಯಲ್ಲಿ 5 ಕೆಜಿ ಅಕ್ಕಿ ಬದಲಾಗಿ ಪ್ರತಿ ಫಲಾನುಭವಿಗಳಿಗೆ 170 ರೂಪಾಯಿ ಹಣ ನೀಡಲಾಗುತ್ತದೆ. ಇದರಿಂದ 44.80 ಲಕ್ಷ ಅಂತ್ಯೋದಯ ಹಾಗೂ 3.97 ಕೋಟಿ ಬಿಪಿಎಲ್‌ ಪಡಿತರ ಚೀಟಿದಾರರಿಗೆ ಪ್ರಯೋಜನ ಆಗಲಿದೆ. ಡಿಬಿಟಿ ಮೂಲಕ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಲಿದೆ. ಈ ಯೋಜನೆ ಅನುಷ್ಠಾನಕ್ಕಾಗಿ ಪ್ರಸ್ತುತ ಬಜೆಟ್‌ನಲ್ಲಿ 10 ಸಾವಿರ ಕೋಟಿ ರೂ. ಹಣ ನಿಗದಿ ಮಾಡಿದೆ.

ಆಂಧ್ರಪ್ರದೇಶ ಹಾಗೂ ತೆಲಂಗಾಣ ಸರ್ಕಾರ ಅಕ್ಕಿ ನೀಡಲು ಮುಂದೆ ಬಂದಿವೆ. ಆಹಾರ ನಿಗಮದ ದರದಲ್ಲಿ ಅಕ್ಕಿ ನೀಡುವಂತೆ ಮನವಿ ಮಾಡುತ್ತೇವೆ. 34 ರೂ.ಗೆ ಅಕ್ಕಿ ಕೊಡುತ್ತೇವೆ ಅಂದರೆ ನಾವು ತೆಗೆದುಕೊಳ್ಳಲು ಸಿದ್ದರಿದ್ದೇವೆ. ಒಂದು ವಾರದಲ್ಲಿ ಅಲ್ಲಿನ ಅಧಿಕಾರಿಗಳು ನಿರ್ಧಾರ ಪ್ರಕಟಿಸುವ ವಿಶ್ವಾಸವಿದೆ. ಸೆಪ್ಟೆಂಬರ್​ ತಿಂಗಳಿನಲ್ಲಿ ಹಣದ ಬದಲು 10 ಕೆಜಿ ಅಕ್ಕಿ ವಿತರಿಸುವ ಚಿಂತನೆ ಇದೆ ಎಂದು ವಿವರಿಸಿದರು.

ವೈಟ್​ಬೋರ್ಡ್​ ಕಾರು ಇದ್ದವರಿಗೆ ಬಿಪಿಎಲ್​ ​​ಕಾರ್ಡ್​ ಇಲ್ಲ

ವೈಟ್​ಬೋರ್ಡ್​ ಕಾರು ಹೊಂದಿರುವವರಿಗೆ ಬಿಪಿಎಲ್​ ​​ಕಾರ್ಡ್​ ಇಲ್ಲ. ಹಳದಿ ಬೋರ್ಡ್ ಕಾರು ಇದ್ದರೆ ಬಿಪಿಎಲ್‌ ಕಾರ್ಡ್ ವಿತರಿಸಲಾಗುವುದು. ಈ ಬಗ್ಗೆ ಚರ್ಚೆ ಮಾಡಿ ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ತಿಳಿಸಿದರು.

22 ಲಕ್ಷ ಬಿಪಿಎಲ್‌ ಕುಟುಂಬಕ್ಕೆ ಹಣ ತತ್‌ಕ್ಷಣ ಸಿಗಲ್ಲ

ಕರ್ನಾಟಕದಲ್ಲಿ 22 ಲಕ್ಷ ಬಿಪಿಎಲ್‌ ಕುಟುಂಬಗಳು ಬ್ಯಾಂಕ್‌ ಖಾತೆಗಳನ್ನು ಹೊಂದಿಲ್ಲ. ಹೀಗಾಗಿ ಅವರಿಗೆ ಈ ಹಣವನ್ನು ನೇರವಾಗಿ ಅವರ ಖಾತೆಗೆ ಜಮೆ ಮಾಡುವುದಕ್ಕೆ ಸರ್ಕಾರದಿಂದ ಸಾಧ್ಯವಾಗುತ್ತಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!