ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಕೋಲಾರ ಸೇರಿದಂತೆ ಕರ್ನಾಟಕ ಆಂದ್ರಪ್ರದೇಶ, ತಮಿಳುನಾಡು ರಾಜ್ಯದ ವಿವಿಧ ಭಾಗಗಳಲ್ಲಿ ಕಳುವು ಮಾಡುತ್ತಿದ್ದ ಕಳ್ಳರನ್ನು ಕೋಲಾರದ ಪೋಲಿಸರು ಬಂಧಿಸಿದ್ದಾರೆ.
ಇತ್ತೀಚೆಗೆ ಕೋಲಾರ ನಗರದ ಕೀಲುಕೋಟೆಯಲ್ಲಿ ಬೀಗ ಹಾಕಿದ್ದ ಮನೆ ಒಂದನ್ನು ಬೀಗ ಒಡೆದು ಕಳ್ಳತನ ಮಾಡಿದ್ದ ಮೂವರು ಕಳ್ಳರನ್ನು ಮೇಲಧಿಕಾರಿಗಳ ಮಾರ್ಗದರ್ಶದಂತೆ ಕೋಲಾರದ ಮಹಿಳಾ ಪೋಲಸ್ ಠಾಣೆ ಇನ್ಸ್ ಪೆಕ್ಟರ್ ಬೈರ ನೇತೃತ್ವದ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಬಾಗೇಪಲ್ಲಿ ತಾಲ್ಲೂಕಿನ ಕೊಟ್ಟಂಪಲ್ಲಿ ಗ್ರಾಮದ ಉಮಾಶಂಕರ್ ಮತ್ತು ಕೆ.ಎಸ್.ಶ್ರೀನಾಥ್ ಹಾಗೂ ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನ ಕೊಡುಗೇಹಳ್ಳಿಯ ಜಗನ್ನಾಥ @ ಜಗ್ಗ ಎಂದು ಗುರುತಿಸಲಾಗಿದೆ.
ಬಂಧಿತರಿಂದ 20 ಲಕ್ಷ ಮೌಲ್ಯದ 270 ಗ್ರಾಂ ಚಿನ್ನ, 507 ಗ್ರಾಂ ಬೆಳ್ಳಿ, ಟಿವಿ, ವಾಚ್ಚುಗಳು, 2 ಕಾರುಗಳನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.