ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಪ್ರಪಂಚ
ಬಂಗಾರಪೇಟೆ
ಮಕ್ಕಳ ಸುದ್ದಿ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಅಶಿಸ್ತು ಮತ್ತು ಅಸಭ್ಯ ವರ್ತನೆಯ ಆರೋಪದ ಮೇಲೆ ಲೋಕಸಭೆಯಿಂದ ಕಾಂಗ್ರೆಸ್ ಸಂಸದ ಹಾಗೂ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಅಮಾನತು ಮಾಡಲಾಗಿದೆ.
ಸಂಸತ್ ಸಮಿತಿಯು ತನ್ನ ವರದಿಯನ್ನು ನೀಡುವವರೆಗೆ ಅವರು ಅಧಿವೇಶನದಿಂದ ಭಾಗವಹಿಸಲು ನಿರ್ಬಂಧ ಹೇರಿ, ಅಮಾನತುಗೊಳಿಸಲಾಗಿದೆ.
ವಿಪಕ್ಷಗಳ ಅವಿಶ್ವಾಸ ನಿರ್ಣಯದ ಮೇಲೆ ಲೋಕಸಭೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರು ಎರಡು ಗಂಟೆ 10 ನಿಮಿಷ ಮಾತನಾಡಿದ ಬಳಿಕ ಅಧೀರ್ ರಂಜನ್ ಚೌಧರಿಯನ್ನು ಅಮಾನತು ಮಾಡಲಾಗಿದೆ.
ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಅಶಿಸ್ತು ಮತ್ತು ಅಸಭ್ಯ ವರ್ತನೆಯ ಆರೋಪ ಹೊರಿಸಿ ಅಧೀರ್ ರಂಜನ್ ಚೌಧರಿ ಹೆಸರನ್ನು ಪ್ರಸ್ತಾಪಿಸಿದರು. ಬಳಿಕ ಅದನ್ನು ಲೋಕಸಭಾ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ಅನುಮೋದಿಸಲು ಮತಕ್ಕೆ ಹಾಕಿದರು. ಬಳಿಕ ಅದನ್ನು ಅನುಮೋದಿಸಲಾಗಿದೆ. ಈ ವೇಳೆಗಾಗಲೇ ವಿಪಕ್ಷಗಳು ಸಭಾತ್ಯಾಗ ಮಾಡಿ, ತೆರಳಿದ್ದರು.