PLACE YOUR AD HERE AT LOWEST PRICE
ಬೆಂಗಳೂರು:ಧರ್ಮಸ್ಥಳದಲ್ಲಿ ಸೌಜನ್ಯ ಸಾವಿನ ಕುರಿತು ಮರು ತನಿಖೆಗೆ ಆದೇಶಿಸಬೇಕು ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
2012ರಲ್ಲಿ ಸೌಜನ್ಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಹತ್ಯೆ ಮಾಡಲಾಗಿತ್ತು. ಪ್ರಕರಣವನ್ನು ಸಿಬಿಐಗೆ ವಹಿಸಿದ ನಂತರವೂ ಸಂತ್ರಸ್ತೆಯ ಕುಟುಂಬಕ್ಕೆ ನ್ಯಾಯ ದೊರಕಿಸಲು ವಿಫಲವಾಗಿದೆ ಎಂದು ಕಟೀಲ್ ಶನಿವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಹತ್ಯೆಗೆ ಕಾರಣರಾದ ಎಲ್ಲಾ ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಹತ್ಯೆಯ ನಂತರ ರಾಜ್ಯ ಪೊಲೀಸರು ಅವರನ್ನು ಬಂಧಿಸಿದ್ದರು. ಈಗ ಪ್ರಕರಣದ ಏಕೈಕ ಶಂಕಿತ ಆರೋಪಿ ಸಂತೋಷ್ ರಾವ್ ಅವರನ್ನು ಸಿಬಿಐ ಖುಲಾಸೆಗೊಳಿಸಿದೆ.
ಪ್ರಕರಣವನ್ನು ಪುನರಾರಂಭಿಸಿ ಮತ್ತು ಸಮಗ್ರ ತನಿಖೆ ನಡೆಸುವ ಮೂಲಕ ರಾಜ್ಯ ಸರ್ಕಾರವು ಕೊಲೆಗೆ ಸಂಬಂಧಿಸಿದಂತೆ ಜನರಲ್ಲಿರುವ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಾಗುತ್ತದೆ ಎಂದು ಕಟೀಲ್ ಪ್ರತಿಪಾದಿಸಿದರು.
ಪ್ರಕರಣದಲ್ಲಿ ಬಿಜೆಪಿ ನಿಲುವು ಸ್ಪಷ್ಟವಾಗಿದೆ. ನಮಗೆ ಸೌಜನ್ಯ ಕುಟುಂಬಕ್ಕೆ ನ್ಯಾಯ ಬೇಕು. ಬೆಳ್ತಂಗಡಿಯಲ್ಲಿ ಸೌಜನ್ಯ ಹತ್ಯೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಆಗಸ್ಟ್ 27 ರಂದು ಬಿಜೆಪಿ ಪ್ರತಿಭಟನೆ ನಡೆಸಲಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿಯ ಎಲ್ಲಾ ಬಿಜೆಪಿ ಶಾಸಕರು, ಎಂಎಲ್ಸಿಗಳು ಮತ್ತು ಸಂಸದರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ಬಿಜೆಪಿ ಶಾಸಕರ ನಿಯೋಗ ಮರುದಿನ ಮುಖ್ಯಮಂತ್ರಿ ಮತ್ತು ರಾಜ್ಯಪಾಲರನ್ನು ಭೇಟಿ ಮಾಡಲಿದೆ ಎಂದು ಕಟೀಲ್ ಹೇಳಿದರು.
ಸಿಬಿಐ ಕೋರ್ಟ್ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿದ ಬೆನ್ನಲ್ಲೇ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮತ್ತು ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್ ಭೇಟಿಯಾಗಿ ಹತ್ಯೆಯ ಬಗ್ಗೆ ಆಳವಾದ ತನಿಖೆಯಾಗಬೇಕು ಎಂದರು.
ಸೌಜನ್ಯ ಅವರ ಹೆಸರಿನಲ್ಲಿ ಧರ್ಮಸ್ಥಳದ ವಿರುದ್ಧ ದುರುದ್ದೇಶಪೂರಿತ ಅಭಿಯಾನದ ಕುರಿತು ಕೇಳಿದ ಪ್ರಶ್ನೆಗೆ ಕಟೀಲ್, ಸೌಜನ್ಯ ಅವರಿಗೆ ನ್ಯಾಯಕ್ಕಾಗಿ ಒತ್ತಾಯಿಸಲು ನಮ್ಮ ಹೋರಾಟದ ಉದ್ದೇಶವಿದೆ. ನಿಜವಾದ ಆರೋಪಿಗಳನ್ನು ಬಂಧಿಸಬೇಕೆಂದು ನಾವು ಬಯಸುತ್ತೇವೆ ಎಂದರು.