ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಚಿತ್ರದುರ್ಗ:ಕೇದಾರನಾಥ ದೇವಾಲಯ ದರ್ಶನಕ್ಕೆ ಹೋಗಿದ್ದ ಚಿತ್ರದುರ್ಗದ ಮೂವರು ಮಹಿಳೆಯರು ಕೇದಾರ ಬಳಿ ಸಿಲುಕಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಗೀತಾ, ಅಂಬಿಕಾ ಹಾಗೂ ರತ್ನಮ್ಮ ಕೇದಾರ ಬಳಿ ಸಿಲುಕಿಕೊಂಡವರಾಗಿದ್ದಾರೆ. ಕಳೆದ ಒಂದು ವಾರದ ಹಿಂದೆ 40 ಜನರ ತಂಡದೊಂದಿಗೆ ಚಿತ್ರದುರ್ಗದ ಮೂವರು ಮಹಿಳೆಯರು ಹಿಮಾಲಯ ಪರ್ವತ ಶ್ರೇಣಿಯ ತಪ್ಪಲಿನಲ್ಲಿರುವ ಕೇದಾರನಾಥ ದೇವಾಲಯ ದರ್ಶನಕ್ಕೆ ಹೋಗಿದ್ದರು.
ಇದೀಗ ಕೇದಾರನಾಥ ಬಳಿ ವಿಪರೀತ ಮಳೆ ಹಾಗೂ ಗುಡ್ಡ ಕುಸಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಅಲ್ಲಿಂದ ಸುಮಾರು 30 ಕೀಲೋ ಮೀಟರ್ ದೂರದಲ್ಲಿ ಇವರು ಸಿಲುಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಈ ಮೂವರು ಮಹಿಳೆಯರು ತಮ್ಮ ತವರಿಗೆ ಸುರಕ್ಷಿತವಾಗಿ ಕರೆಸಿಕೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.