PLACE YOUR AD HERE AT LOWEST PRICE
ಕೆಜಿಎಫ್:ಬೇತಮಂಗಲ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸ್ ಭೇಟಿ ನೀಡಿ ಮೂಲ ಭೂತ ಸೌಕರ್ಯಗಳನ್ನು ಪರಿಶೀಲನೆ ನಡೆಸಿದರು.
ಸರ್ಕಾರಿ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ನೆನ್ನೆಯ ರಾತ್ರಿ ಸ್ಥಳೀಯ ಪುಂಡನೊಬ್ಬ ಪ್ರವೇಶ ಮಾಡಿರುವ ಘಟನೆ ನಡೆದು ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಹಿನ್ನಲೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದರು.
ಬಾಲಕಿಯ ವಿದ್ಯಾರ್ಥಿ ನಿಲಯದ ಕಾಂಪೌಂಡ್ ಒಳಗಡೆ ದುಷ್ಕರ್ಮಿಯೊಬ್ಬ ಯುವಕ ಪ್ರವೇಶ ಮಾಡಿರುವವನ ವಿರುದ್ಧ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರು, ತಕ್ಷಣ ಪೊಲೀಸ್ ಇಲಾಖೆಯ ಅಧಿಕಾರಿ ಆರೋಪಿಯನ್ನು ಬಂಧಿಸಿದ್ದಾರೆ.
ಬಾಲಕಿಯ ವಿದ್ಯಾರ್ಥಿ ನಿಲಯದ ಕಾಂಪೌಂಡ್ ಸ್ವಲ್ಪ ಮಟ್ಟದವರೆಗೆ ಕುಸಿದು ಬಿದ್ದಿದ್ದು, ಕಾಮಗಾರಿಯನ್ನು ಲ್ಯಾಂಡ್ ಆರ್ಮಿ ಸಂಸ್ಥೆಯು ಗುತ್ತಿಗೆ ಪಡೆದಿದ್ದು, ಕಾಮಗಾರಿ ಮಾತ್ರ ಪ್ರಾರಂಭವಾಗದೆ ಹಾಗೆಯೇ ಉಳಿದಿರುವುದರಿಂದ ಹಲವು ಪುಂಡರು ಒಳಗೆ ಪ್ರವೇಶ ಮಾಡಲು ಸುಲಭವಾಗಿದೆ.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸ್ ಸಂಪೂರ್ಣವಾಗಿ ಪರಿಶೀಲನೆ ನಡೆಸಿ ಆರೋಪಿಯ ವಿರುದ್ಧನ ಕಠಿಣ ಕ್ರಮ ಕೈಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ವಿದ್ಯಾರ್ಥಿ ನಿಲಯದಲ್ಲಿ ನೆಲೆಸಿರುವ ವಿದ್ಯಾರ್ಥಿಗಳ ದಿನನಿತ್ಯದ ದೈನಂದಿನ ಚಟುವಟಿಕೆಯ ಬಗ್ಗೆ ಗಮನಿಸಿ ನಿತ್ಯ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಒತ್ತು ನೀಡಲು ನಿಲಯದ ವಾರ್ಡನ್ ಅವರಿಗೆ ಸೂಚಿಸಿದರು.
ಬಡ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವ ಸಲುವಾಗಿ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಆಶ್ರಯ ಪಡೆಯುವ ವಿದ್ಯಾರ್ಥಿಗಳಿಗೆ ಸೂಕ್ತ ಭದ್ರತೆ ನೀಡಬೇಕು ಹಾಗೂ ಅಗತ್ಯ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ವಿವಿಧ ದಲಿತ ಪರ ಸಂಘಟನೆಗಳ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಈ ವೇಳೆ ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ಧೇಶಕ ಶಿವಾರೆಡ್ಡಿ, ದಲಿತ ಮುಖಂಡರಾದ ರಾಧಾಕೃಷ್ಣ, ಪಿಚ್ಚಹಳ್ಳಿ ಮಂಜುನಾಥ್, ಸುಬ್ಬರಾಯಪ್ಪ, ಕೆಂಚಪ್ಪ, ತಂಬಾರ್ಲಹಳ್ಳಿ ರಾಮಪ್ಪ ಮೊದಲಾದವರಿದ್ದರು.