• Sat. May 4th, 2024

PLACE YOUR AD HERE AT LOWEST PRICE

70ರ ಹರೆಯದ ಅಜ್ಜ ಪ್ರೀತಿಸಿ ಮದುವೆಯಾಗುವುದಾಗಿ ಮೋಸ ಮಾಡಿದ್ದಾರೆ. ಅಲ್ಲದೇ, ಜೀವ ಬೆದರಿಕೆ ಹಾಕಿದ್ದಾರೆ ಎಂದು 63 ವರ್ಷದ ಅಜ್ಜಿ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ್ದಾರೆ.

ಈ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ಹಲಸೂರಿನ ದಯಾಮಣಿ(63) ಎಂಬ ಅಜ್ಜಿ, ಲೋಕನಾಥ್ (70) ಎಂಬ ಅಜ್ಜನ ವಿರುದ್ಧ ಬೆಂಗಳೂರು ಪೂರ್ವ ವಿಭಾಗದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನೊಂದ ವೃದ್ಧೆ ನೀಡಿರುವ ದೂರಿನನ್ವಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಯಾಮಣಿಯ ಪತಿ ಹಾಗೂ ಲೋಕನಾಥ್ ಪತ್ನಿ ಸಾವನ್ನಪ್ಪಿದ್ದಾರೆ. ಆರೋಪಿ ಲೋಕನಾಥ ಅವರು ತಮ್ಮ ಮಗನಿಗೆ ಮದುವೆ ಮಾಡಲು ವಧು ಹುಡುಕುತ್ತಿದ್ದಾಗ ಈ ವೃದ್ಧೆಯ ಪರಿಚಯವಾಗಿದೆ. ಕಳೆದ ಐದು ವರ್ಷಗಳ ಹಿಂದೆಯೇ ಈ ಇಬ್ಬರಿಗೂ ಪರಿಚಯವಾಗಿದೆ. ಆರೋಪಿಯ ಮಗನ ಮದುವೆಯನ್ನು ಇಬ್ಬರೂ ಜತೆಗೆ ಸೇರಿ ಮಾಡಿದ್ದಾರೆ.

ಈ ಮದುವೆ ಬಳಿಕ ಅಜ್ಜ-ಅಜ್ಜಿ ನಡುವೆ ಸಲುಗೆ ಬೆಳೆದಿತ್ತು. ನಂತರ ಇಬ್ಬರೂ ಪ್ರೀತಿ ಮಾಡುತ್ತಿದ್ದರು. ಇಬ್ಬರೂ ಜತೆಗೆ ಮೈಸೂರು, ದಾವಣಗೆರೆ, ಬೆಳಗಾವಿ ಸೇರಿದಂತೆ ಹಲವೆಡೆ ಸುತ್ತಾಟ ನಡೆಸಿದ್ದಾರೆ. ಈ ವೇಳೆ ವೃದ್ಧೆ ತನ್ನನ್ನು ಮದುವೆಯಾಗುವಂತೆ ಆರೋಪಿ ಲೋಕನಾಥ್ ಅವರನ್ನು ಕೇಳಿದ್ದರು. ಇದಕ್ಕೆ ಅವರೂ ಕೂಡಾ ಸಮ್ಮತಿಸಿದ್ದರು.

ಕಳೆದ ಕೆಲ ದಿನಗಳಿಂದ ಆರೋಪಿ ವೃದ್ಧೆಯನ್ನು ಕಡೆಗಣಿಸುತ್ತಿದ್ದು, ಮದುವೆ ಮಾಡಿಕೊಳ್ಳಲು ನಿರಾಕರಿಸುತ್ತಿದ್ದಾರೆ. ಇದಲ್ಲದೇ, ಆರೋಪಿ ಕರೆದಾಗ ಮಾತ್ರ ಹೋಗಬೇಕು ಇಲ್ಲದಿದ್ದರೆ, ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವೃದ್ಧೆ ಆರೋಪಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೂರ್ವ ವಿಭಾಗದ ಮಹಿಳಾ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!