• Mon. Apr 29th, 2024

PLACE YOUR AD HERE AT LOWEST PRICE

ವಿಧಾನ ಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ 5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗದಳ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸಹಿತ ಆರು ಮಂದಿಗೆ 14 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಲು ಬೆಂಗಳೂರಿನ ಎಸಿಎಂಎಂ ಕೋರ್ಟ್‌ ಆದೇಶಿಸಿದೆ.

ಹಿಂದುತ್ವದ ಕುರಿತು ಉಗ್ರ ಭಾಷಣದ ಮೂಲಕ ಸಾಮಾಜಿಕ ಸಾಮರಸ್ಯ ಹಾಳು ಮಾಡುತ್ತಿದ್ದ ಚೈತ್ರಾ ಉದ್ಯಮಿಯೊಬ್ಬರಿಗೆ ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಉಡುಪಿಯಲ್ಲಿ ಬಂಧಿಸಿದ್ದರು. ಇಬ್ಬರು ಆರೋಪಿಗಳನ್ನು ಸೆ.23ರವರೆಗೂ ಸಿಸಿಬಿ ಕಸ್ಟಡಿಗೆ ನೀಡಲು ಕೋರ್ಟ್‌ ಆದೇಶ ನೀಡಿದೆ.

ಪೊಲೀಸರು ಕಳೆದ ರಾತ್ರಿ ಉಡುಪಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಮಿಂಚಿನ ಕಾರ್ಯಾಚರಣೆಯಲ್ಲಿ ಚೈತ್ರಾ ಅವರನ್ನು ಬಂಧಿಸಿದ್ದರು. ಅಲ್ಲದೇ ಈಕೆಯ ಗೆಳೆಯ ಶ್ರೀಕಾಂತ್ ನಾಯಕ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕಳೆದ 2023 ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ನೀಡುವುದಾಗಿ ಚೈತ್ರಾ 5 ಕೋಟಿ ರೂ. ವಂಚಿಸಿದ್ದರು.

ಚೆಫ್ ಟಾಕ್ ಸಂಸ್ಥೆ ಮುಖ್ಯಸ್ಥನಾಗಿರುವ ಗೋವಿಂದ ಬಾಬು ಪೂಜಾರಿ ಬೈಂದೂರು ವಿಧಾನಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದರು. ಟಿಕೆಟ್ ಸಿಗದೆ ವಂಚನೆಗೆ ಒಳಗಾದ ಗೋವಿಂದ ಬಾಬು ಪೂಜಾರಿ ಅವರು ಬೆಂಗಳೂರು ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಚೈತ್ರಾ ಕುಂದಾಪುರ ವಿರುದ್ಧ ದೂರು ದಾಖಲಿಸಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!