• Wed. May 1st, 2024

PLACE YOUR AD HERE AT LOWEST PRICE

ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಮತ್ತೊಮ್ಮೆ ಆದೇಶಿಸಿದೆ.

ನವದೆಹಲಿಯ ಸಿಡಬ್ಲ್ಯೂಎಂಎ ಕಚೇರಿಯಲ್ಲಿ ಸೋಮವಾರ ನಡೆದ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.

ಸೆಪ್ಟೆಂಬರ್ 12ರ ಆದೇಶದಂತೆ 15 ದಿನ ನಿತ್ಯ ಐದು ಸಾವಿರ ಕ್ಯೂಸೆಕ್‌ ನೀರು ಹರಿಸಲು ಕರ್ನಾಟಕ್ಕೆ ಸೂಚಿಸಲಾಗಿದೆ. ಮುಂದುವರಿದು, ಕಾವೇರಿ ನೀರು ನಿಯಂತ್ರಣ ಮಂಡಳಿ ಸಮಿತಿಯ ಆದೇಶ ಪಾಲನೆ ಮಾಡಲೇಬೇಕು ಎಂದು ಸಭೆಯಲ್ಲಿ ಖಡಕ್‌ ಆಗಿ ಸೂಚಿಸಿದೆ.

ಈ ಮೂಲಕ ಕಾವೇರಿ ನೀರು ನಿಯಂತ್ರಣ ಸಮಿತಿ ಈ ಹಿಂದೆ ನೀಡಿದ್ದ ಇದೇ ಆದೇಶವನ್ನು ಈಗ ಮತ್ತೊಮ್ಮೆ ಪುನರ್‌ ಉಚ್ಚರಿಸಿದೆ. ಇದರಿಂದ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಸರ್ಕಾರ ಯಾವ ತೀರ್ಮಾನ ತೆಗೆದುಕೊಳ್ಳಲಿದೆ ಎನ್ನುವುದನ್ನು ಕಾದುನೋಡಬೇಕು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!