PLACE YOUR AD HERE AT LOWEST PRICE
ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದ್ದು, ತಮಿಳುನಾಡಿಗೆ ಮುಂದಿನ 15 ದಿನ ಪ್ರತಿದಿನವೂ ಐದು ಸಾವಿರ ಕ್ಯೂಸೆಕ್ ನೀರು ಹರಿಸಲು ಗುರುವಾರ ಆದೇಶ ಹೊರಡಿಸಿದೆ.
ಕಾವೇರಿ ವಿವಾದಕ್ಕೆ ಸಂಬಂಧಿಸಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರಿದ್ದ ತ್ರಿಸದಸ್ಯ ಪೀಠವು ತಮಿಳುನಾಡಿಗೆ ಮುಂದಿನ 15 ದಿನ ಪ್ರತಿದಿನವೂ ಐದು ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ ಹೊರಡಿಸಿದೆ.
ಆ ಮೂಲಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿಯಂತ್ರಣಾ ಸಮಿತಿ ಈ ಹಿಂದೆ ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸೂಚನೆ ನೀಡಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿಯ ನಿರ್ಧಾರವನ್ನು ಎತ್ತಿ ಹಿಡಿದಿದ್ದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡು ಸರ್ಕಾರಕ್ಕೆ ಸೆಪ್ಟೆಂಬರ್ 13ರಿಂದ ಅನ್ವಯವಾಗುವಂತೆ 15 ದಿನಗಳ ಕಾಲ ಪ್ರತಿದಿನ ಐದು ಸಾವಿರ ಕ್ಯೂಸೆಕ್ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಕರ್ನಾಟಕವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.