• Wed. May 1st, 2024

PLACE YOUR AD HERE AT LOWEST PRICE

ಬೆಂಗಳೂರು:ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ ಅವ್ಯವಸ್ಥೆ ಬಗ್ಗೆ ಆಗಾಗ ವರದಿಗಳು ಬರುತ್ತವೆ. ಹಾಸ್ಟೆಲ್‌ಗಳಿಗೆ ಅಧಿಕಾರಿಗಳು, ಜನಪ್ರತಿನಿಧಿಗಳು ದಿಢೀರ್ ಭೇಟಿ ನೀಡುವುದು ನಡೆಯುತ್ತದೆ. ಈಗ ಸರ್ಕಾರ ಈ ಕುರಿತು ಆದೇಶವೊಂದನ್ನು ಹೊರಡಿಸಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಎಲ್. ನರಸಿಂಹಮೂರ್ತಿ, ಸರ್ಕಾರದ ಅಧೀನ ಕಾರ್ಯದರ್ಶಿ-1, ಸಮಾಜ ಕಲ್ಯಾಣ ಇಲಾಖೆ ಈ ಕುರಿತು ಆದೇಶ ಹೊರಡಿಸಿದ್ದಾರೆ. ಸರ್ಕಾರದ ಆದೇಶ 20/01/2012 ಮತ್ತು ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ ಇವರ ಏಕ ಕಡತವನ್ನು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪರಿಶಿಷ್ಟ ವರ್ಗದ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ/ ವಸತಿ ಶಾಲೆಗಳನ್ನು ತಪಾಸಣೆ ಮಾಡಲು ಸೂಚನೆ ನೀಡಲಾಗಿತ್ತು.

ರಾಜ್ಯದ ಆಯಾ ತಾಲ್ಲೂಕಿನ ತಹಶೀಲ್ದಾರರು, ಆಯಾ ಉಪ ವಿಭಾಗದ ಉಪ ವಿಭಾಗಾಧಿಕಾರಿಗಳಿಗೆ ತಮ್ಮ ಭೌಗೋಳಿಕ/ ಅಧಿಕಾರ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿನಿಲಯ/ ವಸತಿ ಶಾಲೆಗಳ ತಪಾಸಣೆ ನಡೆಸಲು ಮತ್ತು ಹೀಗೆ ತಪಾಸಣೆ ಮಾಡಲಾದ ತಪಾಸಣಾ ವರದಿಗಳನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮುಂದಿನ ಅಗತ್ಯ ಕ್ರಮಕ್ಕಾಗಿ ಸಲ್ಲಿಸಲು ಹಾಗೂ ಸಂಬಂಧಪಟ್ಟ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಪಾಸಣಾ ವರದಿಯನ್ನು ಪರಿಶೀಲಿಸಿ ತಪ್ಪಿತಸ್ಥ ವಿದ್ಯಾರ್ಥಿನಿಲಯ/ ವಸತಿ ಶಾಲೆಗಳ ವಾರ್ಡನ್‌ಗಳ ವಿರುದ್ಧ ನಿಯಮಾನುಸಾರ ಕ್ರಮಿಕೈಗೊಳ್ಳಲು ಅಧಿಕಾರ ನೀಡಿ ಆದೇಶಿಸಲಾಗಿದೆ.

ದಿನಾಂಕ 16/08/2023ರಂದು ನಡೆದ ವಿಡಿಯೋ ಸಂವಾದದ ಸಭೆಯಲ್ಲಿ ಚರ್ಚಿಸಿದಂತೆ ಸಮಾಜ ಕಲ್ಯಾಣ ಇಲಾಖೆಯಲ್ಲಿನ ಅವ್ಯವಸ್ಥೆ ಮತ್ತು ವಿದ್ಯಾರ್ಥಿನಿಲಯಗಳಲ್ಲಿನ ಮೂಲಭೂತ ಸೌಲಭ್ಯಗಳ ಕೊರತೆ ಹಾಗೂ ವಿದ್ಯಾರ್ಥಿನಿಲಯಗಳ ಅಸಮರ್ಪಕ ನಿರ್ವಹಣೆ ಬಗ್ಗೆ ಪ್ರತಿ ದಿನ ಮಧ್ಯಮಗಳಲ್ಲಿ ಹಾಗೂ ದಿನ ಪತ್ರಿಕೆಗಳಲ್ಲಿ ವರದಿಗಳು ಪಕಟವಾಗುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.

ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿನ ಸಮರ್ಪಕ ನಿರ್ವಹಣೆ ಬಗ್ಗೆ ಅಲ್ಲಿನ ಕಂದಾಯ ವಿಭಾಗದ ಉಪವಿಭಾಗಧಿಕಾರಿಗಳು ಹಾಗೂ ತಾಲ್ಲೂಕಿನ ತಹಶೀಲ್ದಾರ್ ಅವರು ಇಲಾಖೆಯ ವಿದ್ಯಾರ್ಥಿನಿಲಯಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪತಿ ತಿಂಗಳು ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಲು ಸರ್ಕಾರದ ಆದೇಶ ದಿನಾಂಕ 20/01/2012ರಲ್ಲಿನ ಮಾರ್ಗಸೂಚಿಗಳನ್ನು ಪರಿಷ್ಕರಿಸುವ ಕುರಿತು ಆಯುಕ್ತರು, ಸಮಾಜ ಕಲ್ಯಾಣ ಇಲಾಖೆರವರು ಪ್ರಸ್ತಾವನೆ ಸಲ್ಲಿಸಿರುತ್ತಾರೆ.

ಆದೇಶವೇನು?; ಎಲ್ಲಾ ಅಂಶಗಳನ್ನು ಪರಿಶೀಲಿಸಿ ಸರ್ಕಾರವು ರಾಜ್ಯದ ಆಯಾ ತಾಲ್ಲೂಕಿನ ತಹಶೀಲ್ದಾರರು, ಆಯಾ ಉಪ ವಿಭಾಗದ ಉಪ ವಿಭಾಗಾಧಿಕಾರಿಗಳಿಗೆ ಭೌಗೋಳಿಕ/ ಅಧಿಕಾರ ವ್ಯಾಪ್ತಿಯಲ್ಲಿ ಬರುವ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ/ ವಸತಿ ಶಾಲೆಗಳಿಗೆ ಅನಿರೀಕ್ಷಿತ ಭೇಟಿ/ ತಪಾಸಣೆ ನೀಡಿ ಸರ್ಕಾರಕ್ಕೆ ವರದಿ ಮಾಡುವಂತೆ ಆದೇಶಿಸಿದೆ.

* ಉಪವಿಭಾಗಾಧಿಕಾರಿಗಳು ಕಂದಾಯ ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿ ನಿಲಯಕ್ಕೆ ಪ್ರತಿ ತಿಂಗಳು ಕನಿಷ್ಟ 1 ಬಾರಿ ಅನಿರಿಕ್ಷಿತವಾಗಿ ಭೇಟಿ ನೀಡಿ ವರದಿಯನ್ನು ಸರ್ಕಾರಕ್ಕೆ ನೇರವಾಗಿ ಸಲ್ಲಿಸುವುದು.

* ತಾಲ್ಲೂಕಿನ ತಹಶೀಲ್ದಾರ್ ತಾಲ್ಲೂಕು ವ್ಯಾಪ್ತಿಯಲ್ಲಿನ ವಿದ್ಯಾರ್ಥಿ ನಿಲಯಗಳಿಗೆ ಪ್ರತಿ ತಿಂಗಳು ಕನಿಷ್ಟ 2 ಬಾರಿ ಅನಿರಿಕ್ಷಿತವಾಗಿ ಭೇಟಿ ನೀಡಿ ವರದಿಯನ್ನು ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸುವುದು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!