• Mon. May 6th, 2024

PLACE YOUR AD HERE AT LOWEST PRICE

ಚುನಾವಣೆಯ ವೇಳೆ ನೀಡಿದ್ದ ಐದು ಗ್ಯಾರಂಟಿಗಳ ಪೈಕಿ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ನೀಡಿದ್ದ 10 ಕೆ ಜಿ ಅಕ್ಕಿಯ ಭರವಸೆಯನ್ನು ಮುಂದಿನ ತಿಂಗಳಿನಿಂದ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರದ ಅಸಹಕಾರದಿಂದ ಪೂರೈಸಲಾಗದ 10 ಕೆಜಿ ಅಕ್ಕಿಯನ್ನು ನೀಡುವ ನಿಟ್ಟಿನಲ್ಲಿ ಟೆಂಡರ್ ಪ್ರಕ್ರಿಯೆಯನ್ನು ಆರಂಭಿಸಿದ್ದೇವೆ. ಬರ ಪೀಡಿತ ತಾಲೂಕುಗಳಲ್ಲಿ ಹಣದ ಬದಲು ಅಕ್ಕಿಯನ್ನೇ ಕೊಡುತ್ತೇವೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಎಲ್ಲ ಅರ್ಹ ಪಡಿತರ ಫಲಾನುಭವಿಗಳಿಗೆ ಮುಂದಿನ ತಿಂಗಳಿನಿಂದ (ಅಕ್ಟೋಬರ್‌) ಎಲ್ಲ ಸದಸ್ಯರಿಗೂ ತಲಾ 10 ಕೆ ಜಿ ಅಕ್ಕಿ ನೀಡುತ್ತೇವೆ. ಈಗಾಗಲೇ ಅಕ್ಕಿ ಸರಬರಾಜು ಮಾಡುವ ಬಗ್ಗೆ ಟೆಂಡರ್ ಪ್ರಕ್ರಿಯೆ ನಡೆದಿದೆ. ಇನ್ನು ಮೊದಲನೆಯದಾಗಿ ಆರಂಭದಲ್ಲಿ ಬರಪೀಡಿತವೆಂದು ಘೋಷಣೆ ಮಾಡಲಾದ ತಾಲೂಕಿನಲ್ಲಿ ಹಣದ ಬದಲು ಅಕ್ಕಿ ಕೊಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

ಅನ್ನಭಾಗ್ಯ ಯೋಜನೆಯಡಿಯಲ್ಲಿ ಕಾಂಗ್ರೆಸ್ 10 ಕೆ ಜೆ ಅಕ್ಕಿ ಕೊಡುವುದಾಗಿ ಘೋಷಣೆ ಮಾಡಿತ್ತು. ಆದರೆ ಕಾಂಗ್ರೆಸ್ ಈ ಗ್ಯಾರಂಟಿಯನ್ನು ಜಾರಿಗೆ ತರಲು ಅಕ್ಕಿಯ ಕೊರತೆ ಎದುರಾಗಿತ್ತು. ಅನ್ನಭಾಗ್ಯ ಯೋಜನೆಯಡಿಯಲ್ಲಿ ಅಕ್ಕಿ ಪೂರೈಕೆ ಮಾಡುವ ನಿಟ್ಟಿನಲ್ಲಿ ಅಗತ್ಯ ಅಕ್ಕಿಯನ್ನು ಕೇಂದ್ರ ಆಹಾರ ನಿಗಮದಿಂದ ಖರೀದಿ ಮಾಡಲು ರಾಜ್ಯ ಸರ್ಕಾರ ಮುಂದಾಗಿತ್ತು. ಆದರೆ ಕೇಂದ್ರ ಆಹಾರ ನಿಗಮ ರಾಜ್ಯಕ್ಕೆ ಅಕ್ಕಿ ಪೂರೈಸಲು ನಿರಾಕರಿಸಿತ್ತು. ಹೀಗಾಗಿ, ಅಂತ್ಯೋದಯ ಹಾಗೂ ಬಿಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ಕೊಡಲಾಗದೇ ತಲಾ 5 ಕೆ ಜಿ ಅಕ್ಕಿ ಹಾಗೂ ಉಳಿದ 5 ಕೆ ಜಿ ಬದಲಾಗಿ ಹಣವನ್ನು ನೀಡುತ್ತಿತ್ತು.

ಅಕ್ಕಿ ಕೊರತೆ ಎದುರಾದ ಹಿನ್ನೆಲೆಯಲ್ಲಿ ಐದು ಕೆ ಜಿ ಅಕ್ಕಿಯ ಬದಲಾಗಿ ಪ್ರತಿಯೊಬ್ಬರಿಗೆ ಪ್ರತಿ ತಿಂಗಳು 170 ರೂ ಹಣವನ್ನು ಹಾಕಲು ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿತ್ತು. ಅದರಂತೆ ಅಕೌಂಟಿಗೆ 170 ರೂ. ಹಣವನ್ನು ಹಾಕಲಾಗಿತ್ತು. ಇದೀಗ ಮುಂಬರುವ ತಿಂಗಳಿಂದ ಹಣಕ್ಕೆ ಬದಲಾಗಿ ಹತ್ತು ಕೆಜಿ ಅಕ್ಕಿಯನ್ನು ಬರ ಪೀಡಿತ ತಾಲೂಕುಗಳಿಗೆ ಪೂರೈಕೆ ಮಾಡಲು ನಿರ್ಧಾರ ಮಾಡಲಾಗಿದೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!