• Thu. May 9th, 2024

PLACE YOUR AD HERE AT LOWEST PRICE

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿರುವವರ ವಿರುದ್ಧ ಕ್ರಮ ಕೈಕೊಳ್ಳಬೇಕೆಂದು ಒತ್ತಾಯಿಸಿ ದಾವಣಗೆರೆ ಸೈಬರ್ ಕ್ರೈಂ (ಸಿಇಎನ್) ಪೊಲೀಸ್ ಠಾಣೆಗೆ ಕೆಪಿಸಿಸಿ ವಕ್ತಾರ ಡಿ ಬಸವರಾಜ್​ ದೂರು ನೀಡಿದ್ದಾರೆ.

ಫೇಸ್‌ಬುಕ್‌ನಲ್ಲಿ ಖದೀಮ ಕಾಂಗ್ರೆಸ್ರ್ ಹಾಗೂ ಬಿಜೆಪಿ ಕಾರ್ಯಕರ್ತ ದಾವಣಗೆರೆ ಎಂಬ ಪೇಜ್‌ಗಳಲ್ಲಿ ಪೋಸ್ಟ್‌ ಒಂದನ್ನು ಹಾಕಲಾಗಿದೆ. ಪೋಸ್ಟ್‌ನಲ್ಲಿ ಹಂದಿಯ ಮೇಲೆ ಸಿದ್ದರಾಮಯ್ಯ ಕುಳಿತು ಸವಾರಿ ಮಾಡುತ್ತಿರುವಂತೆ ಫೋಟೋ ಶಾಪ್‌ ಮಾಡಲಾಗಿದೆ. ಅಲ್ಲದೆ, ‘ಮಸೀದಿ ಕಡೆ ಸಿದ್ದು ಸವಾರಿ’ ಎಂದು ಬರೆಯಲಾಗಿದೆ. ಪೋಸ್ಟ್‌ನ ಸ್ಕ್ರೀನ್‌ಶಾಟ್ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪೋಸ್ಟ್‌ನ ಸ್ಕ್ರೀನ್‌ಶಾಟ್‌ ಜೊತೆಗೆ ದೂರು ದಾಖಲಿಸಿರುವ ಬಸವರಾಜ್‌, ಪೋಸ್ಟ್‌ ಹಾಕಿದವರು ಮತ್ತು ಕಮೆಂಟ್‌ ಮಾಡಿರುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಚುನಾವಣಾ ಫಲಿತಾಂಶ ಬಂದ ಸಂದರ್ಭದಲ್ಲಿ ಸಿದ್ದರಾಮಯ್ಯ ವಿರುದ್ಧ ಶಾಲಾ ಚಿತ್ರದುರ್ಗ ಜಿಲ್ಲೆಯ ಶಿಕ್ಷಕ ಶಾಂತಮೂರ್ತಿ ಎಂಬವರು ಪೋಸ್ಟ್‌ ಹಾಕಿದ್ದರು. ಅವರನ್ನು ಅಮಾನತು ಮಾಡಲಾಗಿತ್ತು. ಅಲ್ಲದೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಪೋಸ್ಟ್‌ ಹಾಕಿದ್ದವರ ವಿರುದ್ಧವೂ ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿತ್ತು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!