PLACE YOUR AD HERE AT LOWEST PRICE
ತುಮಕೂರು:ಸಾಲಬಾಧೆಗೆ ಬೇಸತ್ತು ಒಂದೇ ಕುಟುಂಬದ ಮೂವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ತುಮಕೂರಿನ ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ರೈಲಿಗೆ ಸಿಲುಕಿ ತಂದೆ, ತಾಯಿ, ಮಗಳು ಮೃತಪಟ್ಟಿದ್ದಾರೆ.
ತುಮಕೂರಿನ ಮರಳೂರು ನಿವಾಸಿಯಾಗಿದ್ದ ಸಿದ್ದಗಂಗಯ್ಯ ಕಳೆದ ಎರಡು ವರ್ಷಗಳ ಹಿಂದೆ ಕೆಇಬಿಯಲ್ಲಿ ನಿವೃತ್ತಿ ಹೊಂದಿದ್ದರು. ಸಾಕಷ್ಟು ಸಾಲ ಮಾಡಿಕೊಂಡಿದ್ದ ಸಿದ್ದಗಂಗಯ್ಯ, ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕೆ.ಸಿ. ಜನರಲ್ ಆಸ್ಪತ್ರೆ ಬಳಿ ಟೀ ಶಾಪ್ ಇಟ್ಟುಕೊಂಡು ಜೀವ ಸಾಗಿಸುತ್ತಿದ್ದರು.
ಆದರೆ ಸಾಲಗಾರರ ಕಾಟಕ್ಕೆ ಬೇಸತ್ತು ಇಡೀ ಕುಟುಂಬ ಅ-02 ಸೋಮವಾರ ಬೆಳಗಿನ ಜಾವವೇ ಆಟೋದಲ್ಲಿ ಪಂಡಿತನಹಳ್ಳಿ ರೈಲ್ವೆ ಬಳಿ ಬಂದಿದ್ದಾರೆ. ಬಳಿಕ ರೈಲ್ವೆಗೆ ಹಳಿ ಮೇಲೆ ಅಡ್ಡಲಾಗಿ ಮಲಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ರೈಲು ಹತ್ತಿದ ಪರಿಣಾಮ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಸ್ಥಳೀಯರು ಮೃತದೇಹವನ್ನು ಕಂಡು ಕೂಡಲೇ ಯಶವಂತಪುರ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಳಿಕ ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ. ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.